ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಶಿರಾ ಸರ್ಕಾರಿ ನೌಕರರು – ಸಂಘದ ಕಚೇರಿ ಯಲ್ಲಿ ಸಭೆ ಮಾಡಿದ ಸಮಸ್ತ ಸರ್ಕಾರಿ ನೌಕರರು…..

Suddi Sante Desk
ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಶಿರಾ ಸರ್ಕಾರಿ ನೌಕರರು – ಸಂಘದ ಕಚೇರಿ ಯಲ್ಲಿ ಸಭೆ ಮಾಡಿದ ಸಮಸ್ತ ಸರ್ಕಾರಿ ನೌಕರರು…..

ಶಿರಾ

ಶಿರಾ ತಾಲ್ಲೂಕಿನ ಸಮಸ್ತ ಸರ್ಕಾರಿ ನೌಕರರು ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿ ಸಿದ್ದಾರೆ.ಹೌದು2006 ರ ಏಪ್ರಿಲ್ 1ರ ಪೂರ್ವ ದಲ್ಲಿ ರಾಜ್ಯ ಸರ್ಕಾರದಿಂದ ನೇಮಕಾತಿ ಅಧಿ ಸೂಚನೆಗಳ ಮೂಲಕ ಆಯ್ಕೆಯಾಗಿ ನಂತರ ರಾಜ್ಯ ಸರ್ಕಾರದ ಸೇವೆಗೆ ಸೇರಿ ನೂತನ ಪಿಂಚಣಿ ಯೋಜನೆಗೆ ಒಳಪಟ್ಟಿರುವ ನೌಕರ ರನ್ನು ಹಳೆಯ ಪಿಂಚಣಿ ಯೋಜನೆಗೆ ಒಳಪಡಿ ಸಲು ರಾಜ್ಯ ಸರಕಾರ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲಾಯಿತು.

ನಗರದ ಸರ್ಕಾರಿ ನೌಕರರ ಸಂಘದಲ್ಲಿ ಸಭೆ ಸೇರಿದ ನೌಕರರು ಸುಮಾರು 17 ವರ್ಷಗಳಿಂದ ನೂತನ ಪಿಂಚಣಿ ಯೋಜನೆಯಲ್ಲಿ ಸೇವೆ ಸಲ್ಲಿಸು ತ್ತಿದ್ದು ಸರ್ಕಾರದ ಈ ಆದೇಶ ನೆಮ್ಮದಿ ಹಾಗೂ ಭವಿಷ್ಯಕ್ಕೆ ಹೊಸ ಆಶಾಕಿರಣ ತಂದಿದ್ದು ಆದಷ್ಟು ಬೇಗ ಇಲಾಖೆಗಳ ಮುಖ್ಯಸ್ಥರು ತಮ್ಮ ಅಧೀನ. ದಲ್ಲಿ ಸೇವೆ ಸಲ್ಲಿಸುತ್ತಿರುವ ನೌಕಕರಿಂದ ಸೂಕ್ತ ದಾಖಲೆಗಳನ್ನು ಸಂಗ್ರಹಿಸಿ, ಮೇಲಾಧಿಕಾರಿಗಳಿಗೆ ಸಲ್ಲಿಸಲು ಮನವಿ ಮಾಡಲಾಯಿತು.

ಏಪ್ರಿಲ್ 1 2006 ಕ್ಕಿಂತ ಪೂರ್ವದಲ್ಲಿಯೇ ಅಧಿ ಸೂಚನೆಯನ್ನು ಹೊರಡಿಸಿ, ಕಾರಣಾಂತರಗ ಳಿಂದ 2006 ಏಪ್ರಿಲ್ 1 ರ ನಂತರ ನೇಮಕ ಗೊಂಡು, ಶಿರಾ ತಾಲುಕಿನ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ನೌಕರರು ತಮ್ಮ ಇಲಾಖೆಗಳ ಮುಖ್ಯಸ್ಥರಿಗೆ ಅಭಿಮತ ಪತ್ರವನ್ನು ಸಲ್ಲಿಸುವ ಮೂಲಕ ಅನುಕೂಲ ಪಡೆದುಕೊ ಳ್ಳಲು ತಿಳಿಸಲಾಯಿತು.

ಈ ಸಭೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಎನ್. ಜಯಚಂದ್ರ, ಪಿಡಿಒ ರಮೇಶ್, ಸಿ.ಆರ್.ಪಿ.ಎನ್. ಧರ್ಮೇಂದ್ರ, ಶಿಕ್ಷಕ. ರಾದ ಆರ್‌. ತಿಪ್ಪೇಸ್ವಾಮಿ, ಕೆ.ಎಸ್. ಉಮೇಶ್, ನರೇಶಬಾಬು, ಪಿ.ಜಿ.ಗಿರೀಶ್, ವಿಶಾಲಾಕ್ಷಮ್ಮ, ಪಿ.ಎಂ. ಜಯಶ್ರೀ, ಕವಿತಾ, ರಾಧಿಕಾ, ಲಕ್ಷ್ಮೀದೇವಿ, ಜಿ.ಟಿ. ಚಿರಂಜೀವಿ, ಷಂಷೀರ್‌ ಬೇಗ್, ಡಿ.ಜಿ. ನರಸಿಂಹಮೂರ್ತಿ, ಕೇಶವಮೂರ್ತಿ, ಹನುಂ ತೇಗೌಡ, ರಂಗನಾಥ್ ಸೇರಿದಂತೆ ಹಲವರು ಹಾಜರಿದ್ದರು.

ಸುದ್ದಿ ಸಂತೆ ನ್ಯೂಸ್ ಶಿರಾ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.