ಬೆಳಗಾವಿ –
ರಾಜ್ಯದ ಶಿಕ್ಷಕರ ವರ್ಗಾವಣೆ ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ಕ.ರಾ.ಪ್ರಾ.ಶಾ.ಶಿ.ಸಂಘದ ಸರ್ವ ಸದಸ್ಯರು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರನ್ನು ಭೇಟಿ ಯಾಗಿ ಮಾತುಕತೆ ಮಾಡಿ ಚರ್ಚೆ ನಡೆಸಿದರು.
ಹೌದು ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ್ರು ಪಾಟೀಲ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ ಶಿಕ್ಷಕರ ಸಂಘದ ಹಾಗೂ ಶಿಕ್ಷಕರ ಆಕ್ಷೇಪಣೆಗಳನ್ನು ಸಲಹೆಗಳನ್ನು ಪರಿಗಣಿಸದೇ ವೃಂದ ಮತ್ತು ನೇಮಕಾತಿ ನಿಯಮಗಳ ಅಧಿಸೂಚನೆ ಹೊರಡಿಸಿರುವುದನ್ನು ಹಿಂಪ ಡೆದು ಸಂಘದ ಮನವಿಯಂತೆ ಬದಲಾಯಿಸಬೇಕೆಂದು ಪ್ರಾಥಮಿಕ & ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶರನ್ನು ಭೇಟಿಯಾಗಿ ಮೂರು ಸುತ್ತಿನಲ್ಲಿ ಚರ್ಚಿಸಿದರು
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿದರು ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಯ ಪ್ರಧಾನ ಕಾರ್ಯದರ್ಶಿ ಡಾ ಸೆಲ್ವಕುಮಾರ್ ನಿರ್ದೇಶ ಕರಾದ ಪ್ರಸನ್ನಕುಮಾರ, ಹಾಗೂ ಬೆಳಗಾವಿ ಜಿಲ್ಲೆಯ ಅಧ್ಯಕ್ಷರಾದ ಜಯಕುಮಾರ ಹೆಬಳಿ ಸಂಘದ ಪಧಾದಿಕಾರಿ ಗಳು ಉಪಸ್ಥಿತಿರಿದ್ದರು.