ಧಾರವಾಡ –
ಯಾರಿಗೂ ಯಾವ ಇಲಾಖೆಗೂ ಇಲ್ಲದ ಈ ಒಂದು ಶಿಕ್ಷಕರ ವರ್ಗಾವಣೆ ನಿಯಮಗಳನ್ನು ತಿದ್ದುಪಡಿ ಮಾಡಿ ವರ್ಗಾ ವಣೆ ವಂಚಿತ ಶಿಕ್ಷಕ ಶಿಕ್ಷಕಿಯರಿಗೆ ನ್ಯಾಯ ಒದಗಿಸಿ ಅನು ಕೂಲ ಮಾಡಿ ಕೊಡುವಂತೆ ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ ಒತ್ತಾಯವನ್ನು ಮಾಡಿದೆ. ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ)ರಾಜ್ಯ ಘಟಕ ಧಾರವಾಡ ವತಿ ಯಿಂದ ಡಾ ಲತಾ. ಎಸ್. ಮುಳ್ಳೂರ ಸಂಸ್ಥಾಪಕ ರಾಜ್ಯಾಧ್ಯಕ್ಷರು ಹಾಗೂ ಶ್ರೀಮತಿ ಜ್ಯೋತಿ. H. ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಈ ಒಂದು ಆಗ್ರಹ ಕೇಳಿ ಬಂದಿದೆ.