ಅಮಿತ್ ಶಾ ಎರಡು ದಿನ ದಿಢೀರ್ ಕರ್ನಾಟಕ ಪ್ರವಾಸ ರಾಜ್ಯದ ಬಿಜೆಪಿ ಯಲ್ಲಿ ಸಂಚಲನ ಕುತೂಹಲ ಕೆರಳಿಸಿದೆ ಶಾ ರಾಜ್ಯದ ಪ್ರವಾಸ…..

Suddi Sante Desk

.

ಬೆಂಗಳೂರು

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿಢೀರ್ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ ಹೌದು ರಾಜ್ಯಕ್ಕೆ ಆಗಸ್ಟ್ 3 ಹಾಗೂ 4ರಂದು ಕರ್ನಾಟಕ ಪ್ರವಾಸ ಕೈಗೊಂ ಡಿದ್ದಾರೆ ಹೀಗಾಗಿ ರಾಜ್ಯದ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.ಸಧ್ಯ ಒಂದು ಕಡೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಗಲಾಟೆ ಮಧ್ಯೆ ಅಮಿತ್ ಶಾ ಪ್ರವಾಸ ತೀವ್ರ ಕುತೂಹಲ ಮೂಡಿಸಿದೆ.

ಪ್ರವೀಣ್ ನೆಟ್ಟಾರ್ ಹತ್ಯೆ ಬೆನ್ನಲ್ಲೇ ರಾಜ್ಯದಲ್ಲಿ ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಲ್ಲದೇ ನಿರುಪಯುಕ್ತ ಸಿಎಂ,ಕೈಲಾಗದ ಗೃಹ ಸಚಿವ ಎಂದು ಬಿಜೆಪಿ ಕಾರ್ಯಕರ್ತರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದರ ಮಧ್ಯೆ ಶಾ ಕರ್ನಾಟಕಕ್ಕೆ ಬರುತ್ತಿರುವುದು ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ.ಆಗಸ್ಟ್ 3 ಮತ್ತು 4 ಕರ್ನಾಟಕ ದಲ್ಲಿ ಇರುವ ಅಮಿತ್ ಶಾ ಅವರು ಸರ್ಕಾರದ ನಡೆ ಹಾಗೂ ನಾಯಕರ ಕಾರ್ಯಚಟುವಟಿಕೆಗಳ ಬಗ್ಗೆ ಸಮಲೋಚನೆ ನಡೆಸಲಿದ್ದಾರೆ.ಇನ್ನು ಪ್ರವೀಣ್ ಹತ್ಯೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದು ಅದನ್ನು ಕಂಟ್ರೋಲ್ ಮಾಡಲು ರಾಜ್ಯ ಪ್ರವಾಸ ಕೈಗೊಂಡಿದ್ದು,ಒಟ್ಟಿನಲ್ಲಿ ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ ಒಂದು ಕಡೆ ಕುತೂಹಲ ಮೂಡಿಸಿದ್ರೆ ಮತ್ತೊಂದೆಡೆ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.