ಧಾರವಾಡ –
2023 ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಧಾರವಾಡ-71 ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣೆ ಪ್ರಚಾರವಾಗಿ ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅಮೃತ ದೇಸಾಯಿ ಅಬ್ಬರದ ಪ್ರಚಾರ ವನ್ನು ಮಾಡಿದರು
ಗ್ರಾಮಕ್ಕೆ ಭೇಟಿ ನೀಡಿದ ಅಮೃತ ದೇಸಾಯಿ ಯವರು ಪಾದಯಾತ್ರೆ ಮೂಲಕ ಗ್ರಾಮದ ಜನರನ್ನು ಭೇಟಿ ಮಾಡಿ ಮತಯಾಚನೆಯನ್ನು ಮಾಡಿದರು.ಧಾರವಾಡ ಗ್ರಾಮೀಣ ಕ್ಷೇತ್ರಗಳಲ್ಲಿ ಕಳೆದ ಐದು ವರ್ಷಗಳಿಂದ ನಾನು ನಡೆಸಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಾಗರಿಕರಿಗೆ ತಿಳಿಸಿದರು
ಬಿಜೆಪಿ ಕರಪತ್ರಗಳನ್ನು ಹಂಚಿ,ಮುಂಬರುವ ದಿನಗಳಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರಗಳ ಸಂಪೂರ್ಣ ಅಭಿವೃದ್ಧಿಗಾಗಿ ಮತ್ತೊಮ್ಮೆ ನನ್ನನ್ನು ಗೆಲ್ಲಿಸಿ, ಭಾರತ ದೇಶವನ್ನು ಅಭಿವೃದ್ಧಿಯುತವಾಗಿ ಮುನ್ನಡೆಸಲು ಬಿಜೆಪಿ ಪಕ್ಷವನ್ನು ಬೆಂಬಲಿಸಿ ಎಂದು ಮತಯಾಚನೆ ಮಾಡಿದರು
ಈ ಸಂಧರ್ಭದಲ್ಲಿ ಸೋಮಾಪುರ ಗ್ರಾಮದ ಬಿಜೆಪಿ ಕಾರ್ಯಕರ್ತರು,ಗುರು ಹಿರಿಯರು ಹಾಗೂ ಯುವಕರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಕಲಘಟಗಿ…..