ಶಿಕ್ಷಕನ ಮೇಲೆ ಗ್ರಾಮಸ್ಥರಿಂದ ಅಟ್ಯಾಕ್ – ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ BEO…..

Suddi Sante Desk

ಸವದತ್ತಿ

ಪ್ರೌಢಶಾಲೆಯ ದೈಹಿಕ ಶಿಕ್ಷಕನೊಬ್ಬ ಕಾಲೇಜು ವಿದ್ಯಾರ್ಥಿ ನಿಯೊಂದಿಗೆ ಕಳೆದ ಮಧುರ ಕ್ಷಣಗಳ ಫೋಟೋಗಳನ್ನು ವಾಟ್ಸಪ್‌ ಸ್ಟೇಟಸ್‌ನಲ್ಲಿ ಹಾಕಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತನನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದಲ್ಲಿ ನಡೆದಿದೆ.

ಮೂಲತಃ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬೈರವಾಡ ಗ್ರಾಮದವನಾದ ಶಿಕ್ಷಕ ಮಹೇಶ ಬಿರಾದಾರ ಯಕ್ಕುಂಡಿ ಗ್ರಾಮದ ಹೈಸ್ಕೂಲ್‌ನಲ್ಲಿ ತನ್ನ ವಿದ್ಯಾರ್ಥಿನಿಯೊಂದಿಗೆ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅವಳೊಂದಿಗೆ ಖಾಸಗಿ ಕ್ಷಣಗಳನ್ನು ಹಲವು ವರ್ಷಗಳಿಂದ ಕಳೆದಿದ್ದಾನೆ.ಇದೀಗ ಆ ಯುವತಿಗೆ ಮದುವೆ ನಿಶ್ಚಯವಾಗಿದೆ.ಇದರಿಂದ ಈ ಮದುವೆ ನಿಲ್ಲಿಸಲು ಶಿಕ್ಷಕ ಆ ಯುವತಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ಫೋಟೋ ಗಳನ್ನು ವಾಟ್ಸಪ್‌ನ ಸ್ಟೇಟಸ್‌ನಲ್ಲಿ ಹಾಕಿದ್ದಾನೆ.

ಈ ಫೋಟೋಗಳು ವೈರಲ್‌ ಆಗಿ ಕುಪಿತಗೊಂಡ ಗ್ರಾಮ ಸ್ಥರು ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.ಶಿಕ್ಷಕ ಮಾಡಿದ ಕೃತ್ಯ ಕುರಿತು ವಿದ್ಯಾರ್ಥಿನಿ ನೀಡಿದ ದೂರಿನ ಮೇಲೆ ಶಿಕ್ಷಕನ ಮೇಲೆ ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಯ ಕುರಿತು ಶಿಕ್ಷಕ ನೀಡಿದ ದೂರಿನ ಮೇಲೆ ಗ್ರಾಮದ ಕೆಲವರ ಮೇಲೆಯೂ ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಪ್ರಕರಣ ಕುರಿತು ಕ್ಷೇತ್ರ ಶಿಕ್ಷಣಾಧಿಕಾ ರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.