This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

Sports NewsState News

ಶಾಲೆಗಳ ಭವಿಷ್ಯ ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ತಗೆದು ಕೊಂಡರು ಮಹತ್ವದ ನಿರ್ಧಾರ ವಾರದ ಬಳಿಕ ನಿರ್ಧಾರವಾಗಲಿದೆ ರಾಜ್ಯದಲ್ಲಿನ ಶಾಲೆಗಳ ಭವಿಷ್ಯ…..

WhatsApp Group Join Now
Telegram Group Join Now

ಬೆಂಗಳೂರು –

ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಕುರಿತು ಜನರು ಆತಂಕಗೊಳ್ಳುವ ಅವಶ್ಯಕತೆ ಇಲ್ಲ.ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸದ್ಯಕ್ಕೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವುದಿಲ್ಲ ವಾರದ ಬಳಿಕ ಈ ಕುರಿತು ಪರಿಸ್ಥಿತಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾ ಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾ ಯಿ ತಿಳಿಸಿದರು.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು ಮುಖ್ಯಮಂತ್ರಿಗಳು ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ,ಒಂದು ವಾರದ ಬಳಿಕ ನಿರ್ಧಾರವನ್ನು ಮಾಡಲಾಗುವುದು. ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕಡ್ಡಾಯ. ಕ್ರಿಸ್ಮಸ್,ಹೊಸ ವರ್ಷಕ್ಕೆ ಒಂದು ವಾರ ನೋಡಿಕೊಂಡು ಕೆಲ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ವಿವರಿಸಿದರು.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಸುದ ರ್ಶನ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಓಮಿಕ್ರಾನ್ ಕುರಿತು ವಿವರಣೆ ನೀಡಿದ್ದಾರೆ. ಜನರು ಗಾಬರಿಗೊಳ್ಳುವ ಅವಶ್ಯಕತೆ ಇಲ್ಲ. ಹಾಸ್ಟೆಲ್‌ ಗಳಿಗೆ ಈಗಾಗಲೇ ಮಾರ್ಗ ಸೂಚಿ ಹೊರಡಿಸಿದ್ದೇವೆ.ವಾರ್ಡನ್,ಅಡುಗೆಯವರಿಗೆ ಎರಡು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡಿರಬೇಕು. ವ್ಯಾಕ್ಸಿನ್ ಡ್ರೈವ್ ಮಾಡುವ ಕುರಿತು ನಿರ್ಧಾರ ಕೈಗೊಳ್ಳ ಲಾಗಿದೆ.ಗಡಿ ಭಾಗದಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾ ಗಿದೆ ಎಂದರು.ಹಾಸ್ಟೆಲ್, ಕ್ಲಸ್ಟರ್ ಗೆ ಮಾತ್ರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಉಳಿದಂತೆ ಯಾವುದೇ ಹೊಸ ಗೈಡ್‌ಲೈನ್ಸ್ ಇಲ್ಲ ಎಂದರು.ಸಂಪುಟ ಸಭೆಯ ನಂತರ ಶಾಲೆಗಳ ಪರಿಸ್ಥಿತಿ ಬಗ್ಗೆ ಬೆಂಗಳೂರಿನ ಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಿಕ್ಷಣ ಸಚಿವ ಬಿ ಸಿ ನಾಗೇಶ್,ಯಾವುದೇ ಕಾರಣಕ್ಕೂ ಶಾಲೆಗ ಳನ್ನು ಮುಚ್ಚುವುದಿಲ್ಲ,ಪರೀಕ್ಷೆಗಳು ಎಂದಿನಂತೆ ನಡೆಯು ತ್ತಿದೆ.ಶಾಲೆಗಳಲ್ಲಿ ಹಿಂದಿನ ಮಾರ್ಗಸೂಚಿಯೇ ಮುಂದುವ ರಿಯಲಿದೆ.ಹೊಸದಾಗಿ ಜಾರಿಗೆ ತರುವುದಿಲ್ಲ.ವಸತಿ ಶಾಲೆಗ ಳು ಮತ್ತು ಹಾಸ್ಟೆಲ್ ಗಳಲ್ಲಿ ವಿಶೇಷ ಗಮನ ನೀಡುತ್ತೇವೆ ಕೋವಿಡ್ ಬಂದು ಮುಚ್ಚಿ ಹೋಗಿದ್ದ ಶಾಲೆಗಳು ಈಗ ಪುನರಾರಂಭವಾಗಿದೆ, ಮಕ್ಕಳು ಆಸಕ್ತಿಯಿಂದ ಶಾಲೆಗೆ ಬರುತ್ತಿದ್ದಾರೆ. ಕೋವಿಡ್ ತಜ್ಞರ ಸಮಿತಿ ಮುಖ್ಯಸ್ಥ ಡಾ. ಸುದರ್ಶನ್ ನೇತೃತ್ವದ ಸಮಿತಿ ಪೂರ್ಣವಾಗಿ ಅಧ್ಯಯನ ಮಾಡಿ ಇಂದು ಮುಖ್ಯಮಂತ್ರಿಗಳ ಸಚಿವ ಸಂಪುಟ ಮುಂದೆ ಶಾಲೆಗಳನ್ನು ಮುಚ್ಚುವ ಅಗತ್ಯವಿಲ್ಲ, ವಸತಿ ಶಾಲೆ ಮತ್ತು ಹಾಸ್ಟೆಲ್ ಗಳಲ್ಲಿ ತಪಾಸಣೆ ಹೆಚ್ಚಾಗಬೇಕು. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯಿಂದ ಅಧಿಕಾರಿಯ ನ್ನೊಳಗೊಂಡ ಜಂಟಿ ಸಮಿತಿ ಮಾಡಿ ವಸತಿ ಶಾಲೆಗಳು, ಹಾಸ್ಟೆಲ್ ಗಳಿಗೆ ಹೋಗಿ ಆಗಾಗ ತಪಾಸಣೆ ಮಾಡುತ್ತಿರ ಬೇಕೆಂದು ಸಲಹೆ ನೀಡಿದ್ದಾರೆಂದರು


Google News

 

 

WhatsApp Group Join Now
Telegram Group Join Now
Suddi Sante Desk