ಶಾಲಾ ಆರಂಭದ ಬೆನ್ನಲ್ಲೇ ರಾಜ್ಯದ ಶಿಕ್ಷಕರಿಗೆ ಇಲಾಖೆಯಿಂದ ಮಹತ್ವದ ಸಂದೇಶ – ಇಲಾಖೆಯ ಸಂದೇಶವನ್ನು ಪಾಲಿಸುವಂತೆ ಖಡಕ್ ಸೂಚನೆ…..

Suddi Sante Desk
ಶಾಲಾ ಆರಂಭದ ಬೆನ್ನಲ್ಲೇ ರಾಜ್ಯದ ಶಿಕ್ಷಕರಿಗೆ ಇಲಾಖೆಯಿಂದ ಮಹತ್ವದ ಸಂದೇಶ – ಇಲಾಖೆಯ ಸಂದೇಶವನ್ನು ಪಾಲಿಸುವಂತೆ ಖಡಕ್ ಸೂಚನೆ…..

ಬೆಂಗಳೂರು

ಇಂದಿನಿಂದ ರಾಜ್ಯದಲ್ಲಿ ಶಾಲೆಗಳು ಆರಂಭ ಗೊಂಡಿದ್ದು ಶಾಲೆಗಳು ಆರಂಭದ ಬೆನ್ನಲ್ಲೇ ರಾಜ್ಯದ ಶಾಲೆಗಳಿಗೆ ಇಲಾಖೆ ಮಹತ್ವದ ಸಂದೇಶ ವನ್ನು ನೀಡಿದೆ ಹೌದು ಮಳೆಗಾಲದ ಹಿನ್ನಲೆಯಲ್ಲಿ ಕೆಲವೊಂದಿಷ್ಟು ಸೂಚನೆಗಳನ್ನು ನೀಡಲಾಗಿದೆ.

ರಾಜ್ಯದಲ್ಲಿ ಹಿಂಗಾರು ಮಳೆ ಆರಂಭವಾಗಿದೆ. ಜೂನ್ 10ರ ಬಳಿಕ ನೈಋತ್ಯ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆ ಇದೆ.ಈ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಇಲಾಖೆಯ ಆಯುಕ್ತರು ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಎಂಬ ವಿಷಯದ ಮೇಲೆ ಸುತ್ತೋಲೆ ಹೊರಡಿಸಿದ್ದಾರೆ.ದಿನಾಂಕ 30/3/2023, ದಿನಾಂಕ 19/11/2021 ಮತ್ತು ದಿನಾಂಕ 11/7/2022ರ ಸುತ್ತೋಲೆಯನ್ನು ಉಲ್ಲೇಖಿಸಿದ್ದಾರೆ.

ಸುತ್ತೋಲೆಯಲ್ಲಿ ದಿನಾಂಕ 29/05/2023 ರಿಂದ 2023-24ನೇ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಲಿದೆ.ಪ್ರಸ್ತುತ ರಾಜ್ಯದ ಬಹುತೇಕ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರವಾಗಿ ಮಳೆಯುಂಟಾಗುತ್ತಿದ್ದು ಶಾಲೆಗಳನ್ನು ಪ್ರಾರಂಭಿಸಿ ನಡೆಸುವ ಸಂದರ್ಭದಲ್ಲಿ ವಿದ್ಯಾರ್ಥಿ ಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶೈಕ್ಷಣಿಕ ಉಸ್ತುವಾರಿ ಅಧಿಕಾರಿ ಸಿಬ್ಬಂದಿಗಳಿಗೆ ಈ ಮೂಲಕ ಮತ್ತೊಮ್ಮೆ ಸೂಚಿಸಿದೆ ಎಂದು ಹೇಳಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.