This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ರಾಜ್ಯದಲ್ಲಿ NPS ಹೋರಾಟ ಶುರುವಾಗಿದ್ದು ಯಾವಾಗ ಗೊತ್ತಾ – ಹೋರಾಟದ ದಾರಿಯ ಕುರಿತು ಒಂದು ಅವಲೋಕನ…..

ರಾಜ್ಯದಲ್ಲಿ NPS  ಹೋರಾಟ ಶುರುವಾಗಿದ್ದು ಯಾವಾಗ ಗೊತ್ತಾ – ಹೋರಾಟದ ದಾರಿಯ ಕುರಿತು ಒಂದು ಅವಲೋಕನ…..
WhatsApp Group Join Now
Telegram Group Join Now

ಬೆಂಗಳೂರು

ರಾಜ್ಯದ ಸರ್ಕಾರಿ ನೌಕರರಿಗೆ ಮರಣ ಶಾಸನ ವಾಗಿರುವ ಹೊಸ ಪಿಂಚಣಿ ವ್ಯವಸ್ಥೆ ವಿರುದ್ಧ ಸಧ್ಯ ಬೆಂಗಳೂರಿನಲ್ಲಿ ಮಾಡು ಇಲ್ಲವೆ ಮಡಿ ಹೋರಾಟ ನಡೆಯುತ್ತಿದೆ.ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ NPS ನೌಕರರು ಚಳಿಯ ನಡುವೆ ಹೋರಾಟ ಮಾಡು ತ್ತಿದ್ದಾರೆ‌.

ಇದು ಒಂದು ವಿಚಾರವಾದರೆ ಇನ್ನೂ ಹೊಸ ಪಿಂಚಣಿ ಯೋಜನೆ ವಿರುದ್ಧ ರಾಜ್ಯದಲ್ಲಿ 2014ರಿಂದಲೂ ಪ್ರತಿಭಟನೆ ನಡೆಯುತ್ತಿದೆ. 2014ರ ಏಪ್ರಿಲ್‌ 1 ರಂದು ರಾಜ್ಯ ಸರ್ಕಾರಿ ನೌಕರರು ಕಪ್ಪುಪಟ್ಟಿ ಧರಿಸಿ ಮೊದಲಿಗೆ ಪ್ರತಿಭಟನೆ ನಡೆಸಿದ್ದರು.ನಂತರ ಪೋಸ್ಟ್‌ ಕಾರ್ಡ್‌ ಅಭಿಯಾನ ನಡೆಸಲಾಗಿತ್ತು.

ಇನ್ನೂ 2016ರ ಫೆಬ್ರವರಿಯಲ್ಲಿ ನಿಶ್ಚಿತ ಪಿಂಚಣಿ ನಮ್ಮ ಹಕ್ಕು ಎಂಬ ಘೋಷ ವಾಕ್ಯದೊಂದಿಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ರಾಜ್ಯದ ಎಲ್ಲಾ ಜನಪ್ರತಿನಿಧಿಗಳಿಗೆ ಸರ್ಕಾರಿ ನೌಕರರು ಎನ್‌ಪಿಎಸ್‌ ರದ್ದು ಪಡಿಸುವಂತೆ ಮನವಿ ಸಲ್ಲಿಸಿದ್ದರು.

2017ರ ಮಾರ್ಚ್‌ನಲ್ಲಿ ದೆಹಲಿ ಚಲೋ ನಡೆಸಲಾಗಿತ್ತು ಜುಲೈನಲ್ಲಿ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಬೆಂಗಳೂರಿನಲ್ಲಿ ಆಯೋಜಿಸುವ ಮೂಲಕ ಈ ಕುರಿತು ನೌಕರ ರಲ್ಲಿ ಜಾಗೃತಿ ಮೂಡಿಸಲಾಗಿತ್ತು.

2018ರ ಜನವರಿ 20 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ಚಲೋ ಬೃಹತ್‌ ಪ್ರತಿಭಟನೆ ಆಯೋಜಿಸಲಾಗಿತ್ತು ನಂತರ ನೌಕರರು ಒಂದು ದಿನದ ಉಪವಾಸ ಧರಣಿ ಸತ್ಯಾಗ್ರಹ ನಡೆಸಿ ದ್ದರು.ಅದೇ ವರ್ಷ ಅಕ್ಟೋಬರ್‌ನಲ್ಲಿ ಪಾರ್ಲಿ ಮೆಂಟ್‌ ಚಲೋ ಮತ್ತು ನವೆಂಬರ್‌ನಲ್ಲಿ ಬೆಳಗಾವಿ ಚಲೋ ನಡೆಸಲಾಗಿತ್ತು.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದಾಗ ಜಾಥಾ ಹಾಗೂ ಧರಣಿ ನಡೆಸಲಾಗಿತ್ತು.2018 ರ ಅಕ್ಟೋಬರ್‌ 03 ರಂದು ‘ರಕ್ತ ಕೊಟ್ಟೆವು ಪಿಂಚಣಿ ಬಿಡೆವು ಎಂಬ ಘೋಷ ವಾಕ್ಯದೊಂದಿಗೆ ರಾಜ್ಯದ 164 ಕೇಂದ್ರಗಳಲ್ಲಿ ರಕ್ತದಾನ ಕಾರ್ಯಕ್ರಮಗಳನ್ನು ಆಯೋಜಿಸ ಲಾಗಿತ್ತು.

ಈ ವರ್ಷ ಅಕ್ಟೋಬರ್‌ 13 ರಿಂದ ಒಪಿಎಸ್‌ ಸಂಕಲ್ಪ ಯಾತ್ರೆ ನಡೆಸಿ ರಾಜ್ಯದ ಪ್ರತಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎನ್‌ಪಿಎಸ್‌ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು.ಇದೀಗ ಫ್ರೀಡಂ ಪಾಕ್‌ನಲ್ಲಿ ಮಾಡು ಇಲ್ಲವೇ ಮಡಿ ಎಂಬ ಘೋಷ ವಾಕ್ಯದೊಂದಿಗೆ ಅನಿರ್ಧಿಷ್ಟ ಹೋರಾಟ ಆರಂಭಿಸಲಾಗಿದೆ.

ನವೆಂಬರ್‌ನಲ್ಲಿ ಬೆಳಗಾವಿ ಚಲೋ ನಡೆಸಲಾ ಗಿತ್ತು.ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದಾಗ ಜಾಥಾ ಹಾಗೂ ಧರಣಿ ನಡೆಸ ಲಾಗಿತ್ತು 2018 ರ ಅಕ್ಟೋಬರ್‌ 03 ರಂದು ‘ರಕ್ತ ಕೊಟ್ಟೆವು ಪಿಂಚಣಿ ಬಿಡೆವು ಎಂಬ ಘೋಷ ವಾಕ್ಯದೊಂದಿಗೆ ರಾಜ್ಯದ 164 ಕೇಂದ್ರಗಳಲ್ಲಿ ರಕ್ತದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ವರ್ಷ ಅಕ್ಟೋಬರ್‌ 13 ರಿಂದ ‘ಒಪಿಎಸ್‌ ಸಂಕಲ್ಪ ಯಾತ್ರೆ ನಡೆಸಿ, ರಾಜ್ಯದ ಪ್ರತಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎನ್‌ಪಿಎಸ್‌ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು.ಇದೀಗ ಫ್ರೀಡಂ ಪಾಕ್‌ನಲ್ಲಿ ಮಾಡು ಇಲ್ಲವೇ ಮಡಿ ಎಂಬ ಘೋಷ ವಾಕ್ಯದೊಂದಿಗೆ ಅನಿರ್ಧಿಷ್ಟ ಹೋರಾಟ ಆರಂಭಿಸಲಾಗಿದ್ದು ಚಳಿಯ ನಡುವೆ ಹೋರಾಟ ನಡೆಯುತ್ತಿದ್ದು ಈ ಕೂಡಲೇ ಮುಖ್ಯಮಂತ್ರಿ ಸ್ಪಂದಿಸಿ ಘೋಷಣೆ ಮಾಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk