ವರ್ಗಾವಣೆ ಕುರಿತು ರಾಜ್ಯದ ಸರ್ಕಾರಿ ನೌಕರರಿಗೆ ಒಂದಿಷ್ಟು ಮಾಹಿತಿ – ವರ್ಗಾವಣೆ ಕುರಿತು ಒಂದು ಅವಲೋಕನ…..

Suddi Sante Desk

ಬೆಂಗಳೂರು –

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿ ಸುತ್ತಿರುವ ಎ,ಬಿ,ಸಿ ಮತ್ತು ಡಿ ದರ್ಜೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಾವಣೆಗೆ ಸರ್ಕಾರ ಚಾಲನೆ ನೀಡಿದೆ ವಿಧಾನಸಭೆ ಚುನಾವಣೆಗೆ ಒಂದು ವರ್ಷವಷ್ಟೇ ಬಾಕಿ ಇದ್ದು ಈ ಸರ್ಕಾರದ ಅವಧಿಯಲ್ಲಿ ನಡೆಯುತ್ತಿರುವ ಕೊನೆಯ ಸಾಮೂಹಿಕ ವರ್ಗಾವಣೆ ಇದಾಗಿದೆ.ಇನ್ನೂ ವರ್ಗಾವಣೆಯ ಅಧಿಕಾರವನ್ನು ಇಲಾಖೆಯ ಉಸ್ತುವಾರಿ ಹೊತ್ತ ಸಚಿವರಿಗೆ ನೀಡಲಾಗಿದೆ.

ಮೇ 1ರಿಂದ ಜೂನ್‌ 15ರವರೆಗೂ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡಲು ಅವಕಾಶ ಕಲ್ಪಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿ ಸಿದೆ.ಆಯಾ ಇಲಾಖೆಗಳ ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಒಟ್ಟು ಸಂಖ್ಯೆಯಲ್ಲಿ ಶೇ 6ರಷ್ಟು ಮಂದಿಯನ್ನು ಮಾತ್ರ ವರ್ಗಾವಣೆ ಮಾಡಬ ಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ 2013ರ ಜೂನ್‌ 7ರಂದು ಹೊರಡಿಸಿದ್ದ ಮಾರ್ಗಸೂಚಿಗ ಳಲ್ಲಿ ಇರುವ ಇತರ ಅಂಶಗಳು ಈ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ಉಲ್ಲೇ ಖಿಸಲಾಗಿದೆ.ಈ ಮಾರ್ಗಸೂಚಿ ಪ್ರಕಾರಆಯಾ ನೇಮಕಾತಿ ಪ್ರಾಧಿಕಾರಗಳೇ ಅಧಿಕಾರಿಗಳು ಮತ್ತು ನೌಕರರ ವರ್ಗಾ ವಣೆ ಮಾಡಬೇಕಿತ್ತು.ಈ ಅಧಿಕಾರವನ್ನು ಸಚಿವರಿಗೆ ಪ್ರತ್ಯಾ ಯೋಜನೆ ಮಾಡಲಾಗಿದೆ.

ಹಾರನಹಳ್ಳಿ ರಾಮಸ್ವಾಮಿ ನೇತೃತ್ವದ ಆಡಳಿತಸುಧಾರಣಾ ಆಯೋಗದ ಶಿಫಾರಸ್ಸಿನಂತೆ 2013ರಲ್ಲಿ ಮಾರ್ಗಸೂಚಿ ಹೊರಡಿಸಲಾಗಿತ್ತು.ಅದರ ಪ್ರಕಾರ,ನಿರ್ದಿಷ್ಟ ಸೇವಾವಧಿ ಯನ್ನು ಪೂರ್ಣಗೊಳಿಸದೇ ಇರುವ ಯಾವುದೇ ಅಧಿಕಾರಿ ಮತ್ತು ನೌಕರರನ್ನು ವರ್ಗಾವಣೆ ಮಾಡುವಂತಿಲ್ಲ.ಕೆಲವು ವರ್ಷಗಳ ಕಾಲ, ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಸಾಮಾನ್ಯ ವರ್ಗಾವಣೆ ಅಧಿಕಾರವನ್ನು ನೇಮಕಾತಿ ಪ್ರಾಧಿ ಕಾರಗಳಿಗೆ ನೀಡಲಾಗಿತ್ತು.ನೇಮಕಾತಿ ಪ್ರಾಧಿಕಾರ ಗಳು ಆಯಾ ಇಲಾಖೆಯ ಉಸ್ತುವಾರಿ ಹೊಂದಿರುವ ಸಚಿವರ ಅನುಮೋದನೆ ಪಡೆದು ವರ್ಗಾವಣೆ ಆದೇಶ ಹೊರಡಿಸು ತ್ತಿದ್ದವು.2019ರಲ್ಲಿ ಬಿ, ಸಿ ಮತ್ತು ಡಿ ರ್ಜೆ ಅಧಿಕಾರಿಗಳು ಹಾಗೂ ನೌಕರರ ವರ್ಗಾವಣೆ ಅಧಿಕಾರವನ್ನು ಸಚಿವರಿಗೆ ಪ್ರತ್ಯಾಯೋಜನೆ ಮಾಡಲಾಗಿತ್ತು.2020ರಲ್ಲಿ ಕೋವಿಡ್‌ ಕಾರಣದಿಂದ ಸರ್ಕಾರಿ ನೌಕರರ ವರ್ಗಾವಣೆಗೆ ನಿಯಂ ತ್ರಣ ಮಾಡಿದಾಗ ಮುಖ್ಯಮಂತ್ರಿಯವರ ಅನುಮೋದನೆ ಪಡೆದು ವರ್ಗಾವಣೆ ಆದೇಶ ಹೊರಡಿಸಲು ಅವಕಾಶ ನೀಡಲಾಗಿತ್ತು.2021ರಲ್ಲಿ ಪುನಃ ಸಚಿವರಿಗೆ ವರ್ಗಾವಣೆ ಅಧಿಕಾರ ನೀಡಲಾಗಿತ್ತು.ಈ ವರ್ಷ ಅದೇ ವ್ಯವಸ್ಥೆ ಮುಂದುವರಿಸಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.