ಧಾರವಾಡ ಕೆಲಗೇರಿ ಕೆರೆಯಲ್ಲಿ ಮಹಿಳೆ ಆತ್ಮಹತ್ಯೆ – ಕೆರೆಗೆ ಜೀಗಿದು ಆತ್ಮಹತ್ಯೆ ಮಾಡಿಕೊಂಡ ಅನಿತಾ

Suddi Sante Desk

ಧಾರವಾಡ –

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.ಧಾರವಾಡದ ಕೆಲಗೇರಿ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ.ನಗರದ ಸಂತೋಷ್ ನಗರದ ನಿವಾಸಿ ಅನಿತಾ ಹೆಗಡೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಯಾಗಿದ್ದಾರೆ‌.

ಅನಿತಾ ಹೆಗಡೆ ಅವರು ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರಂತೆ.ಹಲವು ದಿನಗಳಿಂದ ಧಾರವಾಡದ ಡಿಮಾನ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಂತೆ ಆರೋಗ್ಯದ ವಿಚಾರವಾಗಿ ಮನನೊಂದ ಅವರು ನಿನ್ನೆ ಸಂಜೆ ಕೆಲಗೇರಿ ಕೆರೆಗೆ ಹಾರಿ ಆತ್ಮ ಹತ್ಯೆಗೆ ಶರಣಾಗಿದ್ದಾರೆ .

ಘಟನಾ ಸ್ಥಳಕ್ಕೆ ಉಪನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.