This is the title of the web page
This is the title of the web page

Live Stream

[ytplayer id=’1198′]

March 2025
T F S S M T W
 12345
6789101112
13141516171819
20212223242526
2728293031  

| Latest Version 8.0.1 |

State News

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಸಹಿತ ಸಾವ್ರರ್ತಿಕ ರಜೆ ಘೋಷಣೆ – ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ…..

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಸಹಿತ ಸಾವ್ರರ್ತಿಕ ರಜೆ ಘೋಷಣೆ – ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ…..
WhatsApp Group Join Now
Telegram Group Join Now

ಬೆಂಗಳೂರು

ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕ ಸಭಾ ಕ್ಷೇತ್ರಗಳಿಗೆ ಏಪ್ರಿಲ್ 26, 2024ರ ಶುಕ್ರವಾ ರದಂದು ಹಾಗೂ ಎರಡನೇ ಹಂತದಲ್ಲಿ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಶೋರಾ ಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಯನ್ನು ಮೇ 07, 2024ರ ಮಂಗಳವಾರ ನಡೆಸಲಾಗುತ್ತಿದೆ

ಮತದಾನ ನಡೆಯುವ ದಿನದಂದು ವೇತನ ಸಹಿತ ಸಾವ್ರರ್ತಿಕ ರಜೆ ಘೋಷಿಸಲಾಗಿದೆ.ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿ ರುವ ನೌಕರರಿಗೆ ಮತದಾನ ಮಾಡಲು ಅನುಕೂ ಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ 1951 ಹಾಗೂ 1881 ರ ಪ್ರಕಾರ ವೇತನ ಸಹಿತ ರಜೆ ನೀಡಲು ಆದೇಶಿಸಿದೆ.

ಮೊದಲ ಹಂತದಲ್ಲಿ ಲೋಕಸಭಾ ಚುನಾವಣಾ ಕ್ಷೇತ್ರಗಳಾದ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ

ಎರಡನೇ ಹಂತದಲ್ಲಿ ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯ ಪುರ, ಕಲಬುರುಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಹಾಗೂ ವಿಧಾನ ಸಭಾ ಉಪಚುನಾವಣೆಯು ಯಾದಗಿರಿ ಜಿಲ್ಲೆಯ ಶೋರಾಪುರ ಕ್ಷೇತ್ರಗಳಿಗೆ ನಡೆಯಲಿದೆ.

ಸದರಿ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂ ಡಂತೆ

ಏಪ್ರಿಲ್ 26 ಮತ್ತು ಮೇ 07, 2024 ರಂದು ನಡೆಯುವ ಚುನಾವಣೆಗೆ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆ ಯನ್ನು ಘೋಷಿಸಿದೆ.ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ, ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲ ವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ರಾಜ್ಯ ಶಿಷ್ಠಾಚಾರ) ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk