ಚಿಕ್ಕಬಳ್ಳಾಪುರ ದಲ್ಲಿ ಯಶಸ್ವಿಯಾಗಿ ನಡೆಯಿತು ರಾಜ್ಯ ಸರ್ಕಾರಿ ನೌಕರರ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ – ಪ್ರತಿಭಾ ಪುರಸ್ಕಾರ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದ ಷಡಾಕ್ಷರಿ ಅವರು

Suddi Sante Desk
ಚಿಕ್ಕಬಳ್ಳಾಪುರ ದಲ್ಲಿ ಯಶಸ್ವಿಯಾಗಿ ನಡೆಯಿತು ರಾಜ್ಯ ಸರ್ಕಾರಿ ನೌಕರರ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ –  ಪ್ರತಿಭಾ ಪುರಸ್ಕಾರ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದ ಷಡಾಕ್ಷರಿ ಅವರು

ಬೆಂಗಳೂರು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು-ಜಿಲ್ಲಾ ಶಾಖೆ, ಚಿಕ್ಕಬಳ್ಳಾಪುರ ವತಿಯಿಂದ ಚಿಕ್ಕಬಳ್ಳಾಪುರ ದಲ್ಲಿ ರಾಜ್ಯ ಸರ್ಕಾರಿ ನೌಕರರ ಸರ್ವ ಸದಸ್ಯರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಯಶಸ್ವಿ ಯಾಗಿ ನಡೆಯಿತು.

ರಾಜ್ಯ ಸರ್ಕಾರಿ ನೌಕರರ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ –  ಪ್ರತಿಭಾ ಪುರಸ್ಕಾರ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ಚಾಲನೆ ನೀಡಿದರು ಚಿಕ್ಕ ಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ  ಈ ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು

ಪ್ರತಿಭಾ ಪುರಸ್ಕಾರ ಮತ್ತು 2021-22ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ*

ಕಾರ್ಯಕ್ರಮವನ್ನು  ರಾಜ್ಯಾಧ್ಯಕ್ಷರಾದ  ಸಿ.ಎಸ್. ಷಡಾಕ್ಷರಿರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷರಾದ ಜಿ ಹರೀಶ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರಾದ ಕೆ ವಿ ನಾಗರಾಜು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾ ದ ಕೃಷ್ಣಮೂರ್ತಿ ಮತ್ತು ಜಿಲ್ಲಾಧಿಕಾರಿಗಳಾದ ನಾಗರಾಜ ಎನ್ ಎಂ IAS

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಿ ಎಲ್ ನಾಗೇಶ್ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಕೇಂದ್ರ ಸಂಘದ ಕಾರ್ಯಾಧ್ಯಕ್ಷರಾದ ಮಲ್ಲಿ ಕಾರ್ಜುನ ಬಳ್ಳಾರಿ ಕೇಂದ್ರ ಸಂಘದ ಹಿರಿಯ ಉಪಾಧ್ಯಕ್ಷರಾದ ಬಸವರಾಜ ಮತ್ತು ಉಪಾಧ್ಯಕ್ಷ ರಾದ ಗಿರಿಗೌಡ, ದಿನೇಶ್ ಮತ್ತು ಚೇತನ್, ಶಂಕರಪ್ಪ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ನೌಕರರ ಸಂಘದ ಪದಾಧಿಕಾರಿಗಳು ಮತ್ತು ನೌಕರರ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು-ಜಿಲ್ಲಾ ಶಾಖೆ, ಚಿಕ್ಕಬಳ್ಳಾಪುರ

 

ಸುದ್ದಿ ಸಂತೆ ನ್ಯೂಸ್ ಚಿಕ್ಕಬಳ್ಳಾಪುರ……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.