ಧಾರವಾಡದಲ್ಲಿ ಅರಣ್ಯ ಇಲಾಖೆ ಯ ಅಧಿಕಾರಿಯಿಂದ ಅತ್ಯಾಚಾರ ಕ್ಕೊಳಗಾದವರಿಗೆ ಬೆದರಿಕೆ ದಾಖಲಾಯಿತು ಮತ್ತೊಂದು ದೂರು…..

Suddi Sante Desk

ಧಾರವಾಡ

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ಮೇಲೆ ಅತ್ಯಾಚಾರದ ಆರೋಪವೊಂದು ಧಾರವಾಡದಲ್ಲಿ ಕೇಳಿ ಬಂದಿದೆ.ಹೌದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಅರಣ್ಯ ಇಲಾಖೆ ಅಧಿಕಾರಿ ಈಗ ಆ ಮಹಿಳೆಗೆ ಜೀವ ಬೆದರಿಕೆಯನ್ನು ಹಾಕುತ್ತಿದ್ದಾರಂತೆ.ಇದನ್ನು ಮಹಿಳೆ ಆರೋಪಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮತ್ತೊಂದು ದೂರನ್ನು ದಾಖಲು ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಇಲಾಖೆ ಅಧಿಕಾರಿ ವಿರುದ್ಧ ಧಾರವಾಡ ಉಪನಗರ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ.ಈ ಹಿಂದೆ ಧಾರವಾಡದಲ್ಲಿ 2019 ರಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ದಲ್ಲಿ ಅರಣ್ಯ ಇಲಾಖೆಯ ವಸತಿ ಗೃಹಕ್ಕೆ ಅವರನ್ನು ಕರೆಸಿಕೊಂಡಿದ್ದ ಅಧಿಕಾರಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ.ನಂತರ ಶಿವಮೊಗ್ಗಕ್ಕೆ ವರ್ಗಾವಣೆಯಾದ ನಂತರ ನಿರ್ಲಕ್ಷವನ್ನು ಮಾಡುತ್ತಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖವನ್ನು ಮಾಡಿದ್ದು ದೂರಿದ್ದಾರೆ.ಅಲ್ಲದೆ ಖಾಸಗಿ ಚಿತ್ರಗಳನ್ನು ಬಹಿರಂಗಪಡಿಸು ವುದಾಗಿ ಹೇಳಿದ್ದು, ಜೀವ ಬೆದರಿಕೆಯನ್ನು ಕೂಡಾ ಹಾಕುತ್ತಿ ದ್ದಾರೆ ಎಂದು ದೂರಿನಲ್ಲಿ ಬರೆದು ಉಪನಗರ ಪೊಲೀಸ್ ಠಾಣೆಗೆ ನೀಡಲಾಗಿದೆ.ಇನ್ನೂ ಅತ್ತ ದೆಹಲಿಯ ಚಾಣಕ್ಯ ಪುರಿ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 22 ರಂದು ದೂರು ದಾಖಲಿಸಲಾಗಿತ್ತು. ಘಟನೆ ಧಾರವಾಡದಲ್ಲಿ ನಡೆದಿದ್ದ ಹಿನ್ನೆಲೆಯಲ್ಲಿ ಧಾರವಾಡ ಉಪನಗರ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿದ್ದು ಸಧ್ಯ ಉಪನಗರ ಪೊಲೀಸರು ಪ್ರಕರಣದ ಪೈಲ್ ನ್ನು ತಗೆದುಕೊಂಡು ತನಿಖೆಯನ್ನು ಮಾಡುತ್ತಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.