ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಬಯಲು – ಕಾಲೇಜಿನ ಪ್ರಾಚಾರ್ಯ ತಂದೆ ಮಗ ಬಂಧನ

Suddi Sante Desk

ಗದಗ –

ಹೌದು ರಾಜ್ಯದಲ್ಲಿ ಮತ್ತೊಂದು ಪರೀಕ್ಷೆಯಲ್ಲಿ ಅಕ್ರಮದ ವಾಸನೆ ಕೇಳಿ ಬಂದಿದೆ.ಹೌದು ಇತ್ತೀಚೆಗೆ ನಡೆದ ಕೆಪಿಟಿಸಿ ಎಲ್‌ ಕಿರಿಯ ಸಹಾಯಕ ಹುದ್ದೆಗಾಗಿ ನಡೆದಿದ್ದ ಪರೀಕ್ಷೆ ಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಗದುಗಿನ ಮುನ್ಸಿಪಲ್‌ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಹಾಗೂ ಅವರ ಮಗ ಸಮೀತ್‌ ಕುಮಾರ್‌ನನ್ನು ಬೆಳಗಾವಿ ಸೈಬರ್‌ ಕ್ರೈಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಮುನ್ಸಿಪಲ್‌ ಕಾಲೇಜು ಸೇರಿದಂತೆ ಗದಗ ಬೆಟಗೇರಿ ಅವಳಿ ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 7ರ ಭಾನುವಾರದಂದು ಪರೀಕ್ಷೆ ನಡೆದಿತ್ತು ಈ ವೇಳೆ ತಂದೆ ಮತ್ತು ಮಗ ಇಬ್ಬರೂ ಸೇರಿಕೊಂಡು ಪ್ರಶ್ನೆ ಪತ್ರಿಕೆ ಸೋರಿಕೆಗೆ ಕೈ ಜೋಡಿಸಿದ್ದರು ಎಂಬ ಆರೋಪ ಕೇಳಿ ಬಂದಿದ್ದು ಇದರ ಬೆನ್ನಲ್ಲೇ ಈಗ ಇಬ್ಬರನ್ನು ವಶಕ್ಕೆ ತಗೆದುಕೊಳ್ಳಲಾಗಿದೆ.ಪತ್ರಕರ್ತನ ಸೋಗಿನಲ್ಲಿ ಮುನ್ಸಿಪಲ್‌ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಅವರ ಮಗ ಸಮಿತ್‌ ಕುಮಾರ್‌ ತನ್ನ ಮೊಬೈಲ್‌ನಲ್ಲಿ ಪ್ರಶ್ನೆಪತ್ರಿಕೆಗಳ ಫೋಟೊ ತೆಗೆದು ಕೊಂಡಿದ್ದಾನೆ.ಜೊತೆಗೆ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದ ಫೋಟೋಗಳನ್ನು ರಾಜ್ಯದ ಬೇರೆ ಬೇರೆ ಪರೀಕ್ಷಾ ಕೇಂದ್ರ ಗಳಿಗೂ ಕಳಿಸಿರುವ ಸಾಧ್ಯತೆಗಳಿವೆ ಎಂದು ಸೈಬರ್‌ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಧ್ಯ ಇಬ್ಬರನ್ನು ವಶಕ್ಕೆ ತಗೆದುಕೊಂಡು ವಿಚಾರಣೆ ಮಾಡ್ತಾ ಇದ್ದಾರೆ.ಇನ್ನೂ ಆರೋಪಿಯ ಮೊಬೈಲ್‌ಗಾಗಿ ಪೊಲೀಸರು ತೀವ್ರ ಶೋಧ ನಡೆಸಿದರೂ ಸಿಕ್ಕಿಲ್ಲ. ಈ ಸಂಬಂಧ ಪೊಲೀಸರು ಕಾಲೇಜಿನ ಪ್ರಾಂಶುಪಾಲರನ್ನು ವಿಚಾರಣೆ ನಡೆಸಿದರು.ಪ್ರಶ್ನೆಪತ್ರಿಕೆ ಸೋರಿಕೆ ಆಗಿರುವ ಜಾಡು ಹಿಡಿದು ಬಂದ ಬೆಳಗಾವಿ ಪೊಲೀಸರು ತನಿಖೆ ಮುಂದುವರಿಸಿದ್ದು ಕೃತ್ಯದ ಹಿಂದಿರುವ ವ್ಯಕ್ತಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.