This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

Sports News

ರಾತ್ರೋರಾತ್ರಿ ಬದಲಾಯಿತು ರಾಜ್ಯ ಸರ್ಕಾರದ ಮತ್ತೊಂದು ಆದೇಶ – ಒಂದೇ ದಿನ ಬದಲಾದ ಸರ್ಕಾರದ ಮತ್ತೊಂದು ಆದೇಶ

WhatsApp Group Join Now
Telegram Group Join Now

ಬೆಂಗಳೂರು –

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಕೆಲವೊಂದು ಮಹತ್ವದ ನಿರ್ಧಾರಗಳನ್ನು ರಾತ್ರೋರಾತ್ರಿ ಕೈಗೊಳ್ಳುತ್ತದೆ ಮತ್ತು ಅಷ್ಟೇ ವೇಗವಾಗಿ ಬದಲಾಯಿಸುತ್ತದೆ ಎಂಬ ಆರೋಪ ಪ್ರತಿಪಕ್ಷಗಳಿಂದ ಕೇಳಿ ಬರುತ್ತಿದ್ದು ಇದಕ್ಕೆ ಮತ್ತೊಂದು ತಾಜಾ ಉದಾಹರಣೆ ಉಸ್ತುವಾರಿ ಸಚಿವರ ನೇಮಕ ಮಾಡಿ ಈಗ ರದ್ದು ಮಾಡಿ ಹೊರಡಿಸಿದ ಆದೇಶ

ಹೌದು ಇತ್ತೀಚೆಗೆ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ವಿಡಿಯೋ,ಫೋಟೋಗ್ರಫಿ ಮಾಡುವಂತಿಲ್ಲ ಎಂಬ ಆದೇಶ ಹೊರಡಿಸಲಾಗಿದ್ದು ಆದರೆ ಸಾರ್ವಜನಿಕರ ವಿರೋಧಕ್ಕೆ ಮಣಿದು ಅದನ್ನು ರಾತ್ರೋರಾತ್ರಿ ಹಿಂಪಡೆಯಲಾಗಿತ್ತು.

ಇದರ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ವರ್ಷ ತುಂಬಿದ ಹಿನ್ನೆಲೆ ಯಲ್ಲಿ ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಂಡಿದ್ದಜನೋತ್ಸವ ಸಮಾವೇಶವನ್ನು ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿನ್ನೆಲೆಯಲ್ಲಿ ರದ್ದುಗೊಳಿಸಲು ಮಧ್ಯರಾತ್ರಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.

ಇದೀಗ ಮತ್ತೊಂದು ಅಂತಹುದೇ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿಗಳನ್ನು ಅದಲು – ಬದಲು ಮಾಡಿ ಶುಕ್ರವಾರ ಹೊರಡಿಸಿದ್ದ ಆದೇಶವನ್ನು ಒಂದೇ ದಿನದಲ್ಲಿ ಹಿಂಪಡೆಯಲಾಗಿದೆ.

ಮೊದಲಿನ ಆದೇಶದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಯನ್ನು ಸಚಿವ ಆನಂದ್ ಸಿಂಗ್ ಅವರಿಗೆ ವಹಿಸಿದ್ದರೆ ಶಶಿಕಲಾ ಜೊಲ್ಲೆ ಅವರಿಗೆ ಕೊಪ್ಪಳದ ಜವಾಬ್ದಾರಿ ನೀಡ ಲಾಗಿತ್ತು.ಆದರೆ ವಿರೋಧಕ್ಕೆ ಮಣಿದು ಈ ಆದೇಶವನ್ನು ರದ್ದು ಪಡಿಸಲಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk