This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ರಾಜ್ಯದ ಜನತೆಗೆ ಮತ್ತೊಂದು ಶಾಕ್ – ವಿಧಾನ ಸಭೆಯಲ್ಲಿ ಅನುಮೋದನೆ – ಕರೋನ ಸಮಯದಲ್ಲಿ ಬೇಲಾಗಿತ್ತಾ……!

WhatsApp Group Join Now
Telegram Group Join Now

ಬೆಂಗಳೂರು –

ಕೊರೊನಾ ದಿಂದಾಗಿ ಈಗಷ್ಟೇ ಎಲ್ಲವೂ ಹಂತ  ಹಂತವಾಗಿ ಸರಿಯಾಗುತ್ತಿದ್ದು ಇನ್ನೂ ಕೂಡಾ ಜನರ ಆರ್ಥಿಕ ಪರಿಸ್ಥಿತಿ ಸರಿಯಾದ ದಾರಿಗೆ ಬರುತ್ತಿಲ್ಲ. ಇವೆಲ್ಲದರ ನಡುವೆ ಈಗ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಶಾಕ್ ಕೊಡಲು ಮುಂದಾಗಿದೆ. ಹೌದು ರಾಜ್ಯದಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸರ್ಕಾರ ಅಸ್ತು ಎಂದಿದೆ. ಮಹಾನಗರ ಪಾಲಿಕೆ, ಪುರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾದ ಎರಡು ತಿದ್ದುಪಡಿ ವಿಧೇಯಕಗಳಿಗೆ ವಿಧಾನ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಯಾಗಲಿದೆ. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ನಗರಪಾಲಿಕೆಗಳ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದ ಕರ್ನಾಟಕ ನಗರಪಾಲಿಕೆಗಳ ತಿದ್ದುಪಡಿ ವಿಧೇಯಕ -2021 ಮಂಡಿಸಿದ್ದಾರೆ.

ಪುರಸಭೆಗಳಿಗೆ ಸಂಬಂಧಿಸಿದ ವಿಧೇಯಕವನ್ನು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಮಂಡಿಸಿ ವಿವರಣೆ ನೀಡಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು, ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಬಾರದೆಂದು ಒತ್ತಾಯಿಸಿದರು.

ಆದರೆ, ಸ್ಥಳೀಯ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು, ಸರ್ಕಾರದ ಅನುದಾನ ಅವಲಂಬನೆ ತಪ್ಪಿಸಲು, ಅಭಿವೃದ್ಧಿ ಕೆಲಸ ಮೂಲಸೌಕರ್ಯ ಕಲ್ಪಿಸಲು, ಹೆಚ್ಚಿನ ಸಂಪನ್ಮೂಲ ಸಂಗ್ರಹಕ್ಕೆ ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಕೇಂದ್ರದ ಮಾರ್ಗಸೂಚಿಗೆ ಅನುಗುಣವಾಗಿ ತೆರಿಗೆ ವ್ಯವಸ್ಥೆ ಸುಧಾರಣೆ ತರಬೇಕಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಆಸ್ತಿ ತೆರಿಗೆ ಪಾವತಿದಾರರಿಗೆ ಏಪ್ರಿಲ್ ವರೆಗೆ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು. ಆಸ್ತಿ ತೆರಿಗೆ ವ್ಯವಸ್ಥೆ ಪರಿಷ್ಕರಣೆ ಹಾಗೂ ಸರಳೀಕೃತ ಆಸ್ತಿ ತೆರಿಗೆ ವ್ಯವಸ್ಥೆ ಜಾರಿಗೆ ಬರಲಿದೆ. ಬೇರೆಬೇರೆ ಪ್ರದೇಶ, ಕಟ್ಟಡ, ನಿವೇಶನಗಳಿಗೆ ಬೇರೆ ಬೇರೆ ತೆರಿಗೆ ದರ ನಿಗದಿಪಡಿಸಬಹುದಾಗಿದೆ ಎಂದು ಹೇಳಲಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk