ಪದವೀಧರ ಶಿಕ್ಷಕರ ಬಡ್ತಿಗೆ ಇನ್ನೊಂದೇ ಹೆಜ್ಜೆ ಪದವೀಧರ ಶಿಕ್ಷಕರಿಗೆ ಇನ್ನೂ ಪ್ರತಿ ವರ್ಷ ಪರೀಕ್ಷೆ ಇಲ್ಲದೆ ಸಿಗಲಿದೆ ಭಡ್ತಿ

Suddi Sante Desk
ಪದವೀಧರ ಶಿಕ್ಷಕರ ಬಡ್ತಿಗೆ ಇನ್ನೊಂದೇ ಹೆಜ್ಜೆ ಪದವೀಧರ ಶಿಕ್ಷಕರಿಗೆ ಇನ್ನೂ ಪ್ರತಿ ವರ್ಷ ಪರೀಕ್ಷೆ ಇಲ್ಲದೆ ಸಿಗಲಿದೆ ಭಡ್ತಿ

ಬೆಂಗಳೂರು

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿನ (1ರಿಂದ 5ನೇ ತರಗತಿ) ಪದವೀಧರ ಶಿಕ್ಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆಯಿಲ್ಲದೆ ಪ್ರತೀ ವರ್ಷ ಶೇ.40 ರಷ್ಟು ಪ್ರಮಾಣದ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗಳಿಗೆ(6ರಿಂದ 8ನೇ ತರಗತಿ)ಬಡ್ತಿ ದೊರೆಯಲು ಇನ್ನೊಂದೇ ಮೆಟ್ಟಿಲು ಬಾಕಿ ಇದೆ ಈ ಸಂಬಂಧ ಶೇ.40ರಷ್ಟು ಹುದ್ದೆಗಳಿಗೆ ಬಡ್ತಿ ನೀಡಲು ಒಪ್ಪಿಗೆ ಕೋರಿ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕಾನೂನು ಇಲಾಖೆ ಬಳಿಕ ಆರ್ಥಿಕ ಇಲಾಖೆಯ ಒಪ್ಪಿಗೆಯೂ ದೊರೆತಿದೆ

ಇನ್ನೂ ಶಿಕ್ಷಣ ಇಲಾಖೆಯು ನೇಮಕಾತಿ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಬಡ್ತಿ ಪ್ರಕ್ರಿಯೆ ಆರಂಭಿಸುವುದಷ್ಟೆ ಬಾಕಿ ಇದೆ ಈ ತನ್ಮೂಲಕ ಆ ಎಲ್ಲಾ ಶಿಕ್ಷಕರಿಗೆ ಬಡ್ತಿ ಭಾಗ್ಯ ಮತ್ತಷ್ಟು ಸನಿಹವಾದಂತಾಗಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಒಟ್ಟು 1,88,638 ಮಂಜೂರಾದ ಶಿಕ್ಷಕ ಹುದ್ದೆಗಳ ಪೈಕಿ 1.08 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗಳಾ ಗಿವೆ.ಇದರಲ್ಲಿ 52,630 ಹುದ್ದೆಗಳು ಪದವಿಧರ ಶಿಕ್ಷಕರಿಗೆ ಮೀಸಲಾಗಿವೆ. ಈ ಪೈಕಿ ಶೇ.33 ರಷ್ಟು ಹುದ್ದೆಗಳನ್ನು ಬಡ್ತಿ ಮೂಲಕ ಉಳಿದ ಶೇ.67 ರಷ್ಟುಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅವಕಾಶವಿತ್ತು.

ಬಳಿಕ ಇದನ್ನು ಶಿಕ್ಷಣ ಇಲಾಖೆ ಬಡ್ತಿ ಮೂಲಕ ತುಂಬುವ ಹುದ್ದೆಗಳ ಪ್ರಮಾಣವನ್ನು ಶೇ.40ಕ್ಕೆ ಹೆಚ್ಚಿಸಿ ಕಾನೂನು ಇಲಾಖೆ ಮತ್ತು ಹಣಕಾಸು ಇಲಾಖೆಯ ಒಪ್ಪಿಗೆಗೆ ಕಳುಹಿಸಿತ್ತು.ಕಾನೂನು ಇಲಾಖೆಯ ಒಪ್ಪಿಗೆ ದೊರೆತ ಬಳಿಕ ಆರ್ಥಿಕ ಇಲಾಖೆಯೂ ಸಮ್ಮತಿಸಿದೆ.ಇನ್ನು ಬಾಕಿ ಇರು ವುದು ಶಿಕ್ಷಣ ಇಲಾಖೆಯು ನೇಮಕಾತಿನಿಯ ಮಾವಳಿಗೆ ತಿದ್ದುಪಡಿ ತಂದು ಬಡ್ತಿ ಪ್ರಕ್ರಿಯೆ ಆರಂಭಿಸುವುದು.

ಇದರಿಂದ ಹಾಲಿ ಇರುವ 52 ಸಾವಿರಕ್ಕೂ ಹೆಚ್ಚು ಪದವಿಧರ ಶಿಕ್ಷಕರ ಹುದ್ದೆಗಳ ಪೈಕಿ 20 ಸಾವಿರಕ್ಕೂ ಹೆಚ್ಚು ಹುದ್ದೆಗಳು ಹಾಲಿ ಸೇವೆ ಯಲ್ಲಿರುವ ಪದವಿಧರ ಶಿಕ್ಷಕರಿಗೇ ದೊರೆ ಯಲಿವೆ.ಉಳಿದ ಶೇ.60ರಷ್ಟುಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಬಡ್ತಿ ಮೂಲಕ ತುಂಬುವ ಹುದ್ದೆಗಳ ಪ್ರಮಾಣವನ್ನು ಶೇ.50ಕ್ಕೆ ಹೆಚ್ಚಿಸಬೇಕೆಂದು ಹಲವು ವರ್ಷಗಳ ಬೇಡಿಕೆ ಇಟ್ಟಿತ್ತು.ಈ ಬೇಡಿಕೆಗೆ ಭಾಗಶಃ ಒಪ್ಪಿಗೆ ನೀಡಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ಅವರು 6ರಿಂದ 8ನೇ ತರಗತಿ ಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಶೇ.40ರಷ್ಟು ಹುದ್ದೆಗಳಿಗೆ ಸೇವಾ ಜ್ಯೇಷ್ಠತೆ ಸೇರಿದಂತೆ ಇತರೆ ಮಾನದಂಡಗಳನ್ನು ಪರಿಗಣಿಸಿ ಪದವೀದರ ಶಿಕ್ಷಕರಿಗೆ ಬಡ್ತಿ ನೀಡಲು ನಿರ್ಧಾರ ಕೈಗೊಂಡಿದ್ದರು

ಇಲಾಖಾ ಅಧಿಕಾರಿಗಳು ಹೇಳುವ ಪ್ರಕಾರ ಶಿಕ್ಷಕರ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಯಾಗಬೇಕಿದೆ.ಬಳಿಕ ಇದು ಜಾರಿಯಾಗಲಿದೆ. ಸುಮಾರು 75 ಸಾವಿರ ಪದವೀಧರ ಶಿಕ್ಷಕರು ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರೆಲ್ಲರಿಗೂ ಒಮ್ಮೆಲೇ ಬಡ್ತಿ ಸಿಗುವುದಿಲ್ಲ.ಪ್ರತಿ ವರ್ಷ ಸೇವಾ ಸೇಷ್ಠತೆ ಹಾಗೂ ಇತರೆ ಮಾನ ದಂಡಗಳ ಅನುಸಾರ ಬಡ್ತಿ ನೀಡಬೇಕಾಗುತ್ತದೆ.

6ರಿಂದ 8ನೇ ತರಗತಿಗಳಲ್ಲಿನ ಪದವೀಧರ ಶಿಕ್ಷಕ ಹುದ್ದೆಗಳಲ್ಲಿ ಶೇ.40 ಹುದ್ದೆಗಳನ್ನು ಹಾಲಿ ಸೇವಾ ನಿರತ ಪದವೀಧರ ಶಿಕ್ಷಕರಿಗೇ ಬಡ್ತಿ ನೀಡುವ ಇಲಾಖೆಯ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದು ಸಂತಸದ ಸುದ್ದಿ ನಮ್ಮ ಸಂಘದ ನಿರಂತರ ಪ್ರಯತ್ನಕ್ಕೆ ಸಿಕ್ಕ ಜಯ. ಇದ ಕ್ಕಾಗಿ ಶಿಕ್ಷಣ ಸಚಿವರಿಗೆ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಆದಷ್ಟುಬೇಗೆ ಇಲಾಖೆಯು ನೇಮ ಕಾತಿ ನಿಯಮಾವಳಿ ತಿದ್ದುಪಡಿ ಮಾಡಿ ಬಡ್ತಿ ಪ್ರಕ್ರಿಯೆ ನಡೆಸಬೇಕು ಅಂತ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ತಿಳಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.