ಉಡುಪಿ –
ಉಡುಪಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2021-22ರ ಸಾಲಿನಲ್ಲಿ ಖಾಲಿ ಇರುವ ಪ್ರಾಥಮಿಕ ವಿಭಾಗದ ಬಿಐಇಆರ್ಟಿ ಹುದ್ದೆಗೆ ಅರ್ಹ ಸರಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿಶೇಷ ಚೇತನ ಮಕ್ಕಳ ಮನೆ-ಮನೆಗೆ ಭೇಟಿ ನೀಡಿ ಬೋಧಿಸುವ ಮತ್ತು ಸಂಪನ್ಮೂಲ ಕೇಂದ್ರದಲ್ಲಿ ಬೋಧಿಸುವವರಿಗಾಗಿ ಇರುವ ಪ್ರಾಥಮಿಕ ವಿಭಾಗ ದ ಈ ಬಿಐಇಆರ್ಟಿ ಹುದ್ದೆಗೆ,ಶಿಕ್ಷಕ ತರಬೇತಿ ಯೊಂದಿಗೆ ವಿಶೇಷ ಡಿ.ಇಡಿ ಕಡ್ಡಾಯವಾಗಿದೆ. ನಿವೃತ್ತರಿಗೆ ಅವಕಾಶವಿಲ್ಲ.ಆಸಕ್ತರು ಹತ್ತಿರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂ ದಿಗೆ ಜೂ.21ರಂದು ಅಪರಾಹ್ನ 12:00 ಗಂಟೆ ಒಳಗೆ ಅರ್ಜಿ ಸಲ್ಲಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಳ ನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆ ಯುವಂತೆ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.