ಬೆಂಗಳೂರು –
ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿಯನ್ನು ಮಾಡಲಾಗಿದ್ದು, ಹಲವರಿಗೆ ಕೋಕ್ ನೀಡಲಾಗಿದ್ದು ಹೊಸದಾಗಿ ಹಲವ ರನ್ನು ನೂತನ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲಾ ಗಿದೆ.ಹೌದು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ,ಉಡುಪಿಯ ನಯನಾ ಗಣೇಶ್ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಅನಿವಾಸಿ ಭಾರತೀಯ ವಿಭಾಗದ ರಾಜ್ಯ ಸಂಚಾಲ ಕರಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,ಬಿಜೆಪಿ ಪ್ರಕೋಷ್ಟಗಳ ರಾಜ್ಯ ಸಹ ಸಂಯೋಜಕರಾಗಿ ಜಯತೀರ್ಥ ಕಟ್ಟಿ ಕಾನೂನು ಪ್ರಕೋಷ್ಟ ರಾಜ್ಯ ಸಂಚಾಲಕರಾಗಿ ಯೋಗೇಂದ್ರ ಸಹಸಂಚಾಲಕರಾಗಿ ವಿನೋದ್ ಪಾಟೀಲ್,ರಾಜ್ಯ ಮೀನು ಗಾರರ ಪ್ರಕೋಷ್ಟದ ಸಂಚಾಲಕರಾಗಿ ಗೋವಿಂದ ಬಾಂಡೇಕರ,ಸಹ ಸಂಚಾಲಕರಾಗಿ ನಾಗಪ್ಪ ಅಂಬಿ ಅವರನ್ನು ನೇಮಕ ಮಾಡಲಾಗಿದೆ.
ಹೊಸದಾಗಿ ಒಟ್ಟು 15 ಜನರನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.