ಹೆಚ್ಚುತ್ತಿದೆ ಕೋವಿಡ್ ದಯಮಾಡಿ ಪರೀಕ್ಷೆ ರದ್ದು ಮಾಡಿ – ಕೇಂದ್ರ ಸರ್ಕಾರಕ್ಕೆ ಅರವಿಂದ್ ಕೇಜ್ರಿ ವಾಲ್ ಮನವಿ…..

Suddi Sante Desk

ನವದೆಹಲಿ –

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿದೆ. ಆರೋಗ್ಯ ಸಚಿವಾಲಯ ಮಂ ಗಳವಾರ ಬೆಳಿಗ್ಗೆ ಬಿಡುಗಡೆ ಮಾಡಿದ ಅಂಕಿ ಅಂಶಗ ಳ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,61,736 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನದಲ್ಲಿ ದೇಶದಲ್ಲಿ ಒಂದೂ ವರೆ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಆತಂಕ ಹೆಚ್ಚಿಸಿದೆ

ಸಿಬಿಎಸ್‌ಇ ಆಫ್ ಲೈನ್ ಪರೀಕ್ಷೆಯನ್ನು ರದ್ದುಗೊಳಿ ಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿ ವಾಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ 6 ಲಕ್ಷ ಮಕ್ಕ ಳು ಸಿಬಿಎಸ್‌ಇ ಪರೀಕ್ಷೆ ಬರೆಯಲಿದ್ದಾರೆ. ಸುಮಾರು 1 ಲಕ್ಷ ಶಿಕ್ಷಕರು ಸಹ ಇದರ ಭಾಗವಾಗಲಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ಇದು ಕರೋನಾದ ದೊಡ್ಡ ಹಾಟ್ ಸ್ಪಾಟ್ ಆಗಬಹುದು.ಹಾಗಾಗಿ ಪರೀಕ್ಷೆ ರದ್ದು ಮಾಡಬೇಕು ಈ ಮೂಲಕ ಅನಾಹುತ ತಪ್ಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಮತ್ತು ಮಹಾರಾಷ್ಟ್ರ ಸರ್ಕಾರ ಸಹ ಪರೀಕ್ಷೆ ರದ್ದುಮಾಡಲು ಒತ್ತಾಯ ಮಾಡಿತ್ತು. ದೆಹಲಿ,ಮಹಾರಾಷ್ಟ್ರದಲ್ಲಿ ಕೊರೋನಾ ಪರಿಸ್ಥಿತಿ ಕೈ ಮೀರುವ ಹಂತಕ್ಕೆ ಹೋಗಿ ದ್ದು ಜನ ಆತಂಕದಲ್ಲಿಯೇ ಇದ್ದಾರೆ ಎಂದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.