ಲೋಕಾಯುಕ್ತ ಬಲೆಗೆ ಬಿದ್ದ ASI – OC ಆಡಿಸಲು 1 ಲಕ್ಷ ರೂಪಾಯಿ ಮಾಮೂಲಿಗೆ ಬೇಡಿಕೆ ಇಟ್ಟಿದ್ದ ASI ನನ್ನು ಕೂಲಿ ಕಾರ್ಮಿಕರ ವೇಷದಲ್ಲಿ ಬಂದು ಟ್ರ್ಯಾಪ್ ಮಾಡಿದ ಲೋಕಾಯುಕ್ತ ಅಧಿಕಾರಿಗಳು…..

Suddi Sante Desk
ಲೋಕಾಯುಕ್ತ ಬಲೆಗೆ ಬಿದ್ದ ASI – OC ಆಡಿಸಲು 1 ಲಕ್ಷ ರೂಪಾಯಿ ಮಾಮೂಲಿಗೆ ಬೇಡಿಕೆ ಇಟ್ಟಿದ್ದ ASI ನನ್ನು ಕೂಲಿ ಕಾರ್ಮಿಕರ ವೇಷದಲ್ಲಿ ಬಂದು ಟ್ರ್ಯಾಪ್ ಮಾಡಿದ ಲೋಕಾಯುಕ್ತ ಅಧಿಕಾರಿಗಳು…..

ಶಿವಮೊಗ್ಗ

ಲೋಕಾಯುಕ್ತ ಬಲೆಗೆ ಬಿದ್ದ ASI – OC ಆಡಿಸಲು 1 ಲಕ್ಷ ರೂಪಾಯಿ ಮಾಮೂಲಿಗೆ ಬೇಡಿಕೆ ಇಟ್ಟಿದ್ದ ASI ನನ್ನು ಕೂಲಿ ಕಾರ್ಮಿಕರ ವೇಷದಲ್ಲಿ ಬಂದು ಟ್ರ್ಯಾಪ್ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಹೌದು

OC ಆಡಿಸಲು ಮಾಮೂಲಿಗೆ ಬೇಡಿಕೆಯನ್ನು ಇಟ್ಟಿದ್ದ ಎಎಸ್ಐ ರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ. ಓಸಿ ಆಡಿಸಲು ಅನುಮತಿಗೆ ಮಾಮೂಲಿ ರೂಪದಲ್ಲಿ ₹1 ಲಕ್ಷ ಲಂಚಕ್ಕೆ ಬೇಡಿಕೆಯನ್ನು ಇಟ್ಟಿದ್ದರು.ಶಿವಮೊಗ್ಗದ ಸಿಇಎನ್ ಠಾಣೆಯ ಸಹಾಯಕ ಸಬ್ ಇನ್‌ಸ್ಟೆಕ್ಟರ್ ಮೊಹಮ್ಮದ್ ರೆಹಮಾನ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರಾಗಿದ್ದಾರೆ.

ಶಿವಮೊಗ್ಗದ ಆರ್‌ಎಂಎಲ್ ನಗರದ ನಿವಾಸಿ ರಫೀಕ್ ಎಂಬುವವರಿಗೆ ಮಾಮೂಲಿ ರೂಪದಲ್ಲಿ ಮಾಸಿಕ ₹1.20 ಲಕ್ಷ ಹಣ ಕೊಡುವಂತೆ ಮೊಹಮ್ಮದ್ ರೆಹಮಾನ್ ಬೇಡಿಕೆ ಇಟ್ಟಿದ್ದರು. ಈ ಒಂದು ಕುರಿತಂತೆ ಲೋಕಾಯುಕ್ತರಿಗೆ ದೂರನ್ನು ನೀಡಿದ್ದರು.1 ಲಕ್ಷ ಪಡೆಯುವಾಗ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.ಹಮಾಲಿಗಳ ವೇಷದಲ್ಲಿ ಬಂದಿದ್ದರು

ಲೋಕಾಯುಕ್ತ ಪೊಲೀಸರು ರೆಹಮಾನ್ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವುದನ್ನು ಖಾತರಿಪಡಿಸಿಕೊಂಡಿದ್ದರು.ಕೂಡಲೇ ಲೋಕಾಯುಕ್ತ ಪೊಲೀಸರು ರೆಡ್‌ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಶಿವಮೊಗ್ಗದ ಲೋಕಾಯುಕ್ತ ಹಾಗೂ ಸ್ಥಳೀಯ ಪೊಲೀಸರು ಮೊಹಮ್ಮದ್ ರೆಹಮಾನ್ ಅವರಿಗೆ ಪರಿಚಯವಿದ್ದ ಕಾರಣ ಚಿತ್ರದುರ್ಗದಿಂದ ಬಂದಿದ್ದ ಎಸ್ಪಿ ವಾಸುದೇವ ರಾಮ್ ನೇತೃತ್ವದ ಲೋಕಾಯುಕ್ತ ಪೊಲೀಸರು ಪಂಚೆ-ಬನಿಯನ್ ತೊಟ್ಟು ಹಮಾಲಿಗಳ ವೇಷದಲ್ಲಿ ಕಾರ್ಯಾಚರಣೆಗೆ ಇಳಿದಿದ್ದರು.

ಇಲ್ಲಿನ ಜಯನಗರ ಪೊಲೀಸ್ ಠಾಣೆ ಕಟ್ಟಡದ ಲ್ಲಿರುವ ಸಿಇಎನ್ ಠಾಣೆಯ ಬಳಿ ಕಾದು ನಿಂತಿದ್ದ ಲೋಕಾಯುಕ್ತ ಪೊಲೀಸರು ನಿಗದಿಯಂತೆ ಠಾಣೆ  ಯ ಬಳಿ ರೆಹಮಾನ್ ದೂರುದಾರ ರಫೀಕ್ ಅವರಿಂದ ಲಂಚದ ಮೊತ್ತ ಪಡೆಯುವಾಗ ದಾಳಿ ನಡೆಸಿ ಹಣದ ಸಮೇತ ಬಂಧಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿತ್ರದುರ್ಗ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.