ಸಧ್ಯಕ್ಕೆ ರಾಜ್ಯದ ಶಾಲಾ ಕಾಲೇಜು ಗಳಿಗೆ ರಜೆ ಕೊಡುವ ಚಿಂತನೆ ಇಲ್ಲ ಪೋಷಕರೇ ಆತಂಕ ಬೇಡ ಎನ್ನುತ್ತಾ ಧೈರ್ಯ್ಯ ತುಂಬಿದ ಶಿಕ್ಷಣ ಸಚಿವರು…..

Suddi Sante Desk

ತುಮಕೂರು –

ರಾಜ್ಯದಲ್ಲಿ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿ ಗಳಲ್ಲಿ ಅಷ್ಟೇ ಪಾಸಿಟಿವ್ ಬಂದಿದ್ದು ಈ ಕುರಿತಂತೆ ಯಾವುದೇ ಪೋಷಕರು ವಿದ್ಯಾರ್ಥಿಗಳು ಆತಂಕವನ್ನು ಪಡಬಾರದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು. ತುಮಕೂರಿನಲ್ಲಿ ಮಾತನಾಡಿದ ಅವರು ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ ಎಂದರು.

ಉಳಿದಂತೆ ಯಾರಿಗೂ ಪಾಸಿಟಿವ್ ಬಂದಿಲ್ಲ ಇನ್ನೂ ಈ ಕುರಿತಂತೆ ಈಗಾಗಲೇ ಸಿಎಂ ನೇತೃತ್ವದಲ್ಲಿ ಸಭೆ ನಡೆದಿದೆ ಎಂದರು.ಇದರೊಂದಿಗೆ ಸೂಕ್ತ ಕ್ರಮವನ್ನು ಕೈಗೊಳ್ಳಲಾಗು ತ್ತಿದೆ.ಹಾಗಾಗಿ ಪೋಷಕರು ಯಾವುದೇ ರೀತಿಯ ಆತಂಕ ಬೇಡ.ಪ್ರತಿ ಅರ್ಧ ಗಂಟೆಗೊಮ್ಮೆ ಶಾಲೆಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ ಶಾಲಾ ಅವಧಿಯಲ್ಲಿ ಸಂಪೂರ್ಣ ಮಾಸ್ಕ್ ಧರಿಸಲು ಕ್ರಮ ಕೈಗೊಳ್ಳಲಾಗಿದೆ.

ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ಮುಂದೆ ಏನಾದರೂ ಕ್ರಮ ಕೈಗೊಳ್ಳಬೇಕಾದರೆ ತೆಗೆದುಕೊಳ್ಳುತ್ತೇವೆ ಎಂದರು.ಇನ್ನೂ ಕೇರಳದಿಂದ ಬರುವವರ ಮೇಲೆ ಸಂಪೂರ್ಣ ನಿಗಾ ವಹಿಸಲಾಗಿದೆ.ಸದ್ಯಕ್ಕೆ ಶಾಲಾ ಕಾಲೇಜು ಗಳಿಗೆ ರಜೆ ಕೊಡುವ ಚಿಂತನೆ ನಡೆದಿಲ್ಲವೆಂದರು.

ಮಂಗಳೂರು ಭಾಗದಲ್ಲೂ ವಿಶೇಷವಾಗಿ ನಿಗಾವಹಿಸ ಲಾಗಿದೆ..ಆ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಪಾಸಿಟಿವ್ ಬಂದಿಲ್ಲ..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.