ಚಿಕ್ಕಬಳ್ಳಾಪುರ –
ನೈಟ್ ಕರ್ಫ್ಯೂ ಉಲ್ಲಂಘಿಸಿ ನ್ಯೂ ಇಯರ್ ಪಾರ್ಟಿ ಮಾಡ್ತಿದ್ದ ಹಿನ್ನೆಲೆಯಲ್ಲಿ ಇದನ್ನು ಪ್ರಶ್ನಿಸಲು ಹೋಗಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆದ ಘಟನೆ ಚಿಕ್ಕಬಳ್ಳಾ ಪುರ ದಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲಿಯೇ ಪೊಲೀಸರ ಮೇಲೆ ಹಲ್ಲೆಯನ್ನು ಮಾಡಿದ್ದಾರೆ ಪುಂಡರು. ಚಿಕ್ಕಬಳ್ಳಾಪುರ ಇನ್ಸ್ಪೆಕ್ಟರ್ ಪ್ರಶಾಂತ್ ರನ್ನ ಎಳೆದಾಡಿ ಹಲ್ಲೆಗೆ ಯತ್ನಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ರೆಸಾರ್ಟ್ ನಲ್ಲಿ ಈ ಒಂದು ಘಟನೆ ನಡೆದಿದೆ.ವೈಟ್ ನಿರ್ವಾಣ ಜಡೇ ರೆಸಾರ್ಟ್ ಮಾಲೀಕರು ಹಾಗೂ ಸಹಚರರಿಂದ ನಡೆದಿದೆ ಡಿಜೆ ಹಾಕಿಕೊಂಡು ಮೋಜು ಮಸ್ತಿ ಮಾಡ್ತಿದ್ದ ತಂಡ ಸಧ್ಯ ಈ ಒಂದು ಕುರಿತು ದೂರನ್ನು ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ