ಕೋವಿಡ್ ಮಾರ್ಗಸೂಚಿ ಹಿನ್ನಲೆ – ಜೋಗ ಜಲಪಾತ ವೀಕ್ಷಣೆಯಲ್ಲಿ ಗಣನೀಯ ಇಳಿಕೆ – ಪ್ರವಾಸಿಗರ ಅಸಮಾಧಾನ…..

Suddi Sante Desk

ಜೋಗ –

ಕೊರೊನಾ 3ನೇ ಅಲೆ ಕಾರಣ ಆಗಸ್ಟ್ 5 ರಿಂದ ಜೋಗ ವೀಕ್ಷಣೆಗೆ ಬರುವವರಿಗೆ ಕಡ್ಡಾಯವಾಗಿ ಕೋವಿಡ್ ವರದಿ ತಗೆದುಕೊಂಡು ಬರಬೇಕು ಎಂಬ ಒಂದು ಆದೇಶದಿಂದಾಗಿ ಪ್ರವಾಸಿಗರು ಅಸಮಾಧಾ ನಗೊಂಡಿದ್ದಾರೆ.ಹೌದು ಶಿವಮೊಗ್ಗ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳ ಭೇಟಿಗೆ ಕೋವಿಡ್ ಮಾರ್ಗಸೂ ಚಿಗಳನ್ನು ಜಿಲ್ಲಾಧಿಕಾರಿ ವಿಧಿಸಿದ್ದು,ಜೋಗ ಜಲಪಾ ತದಲ್ಲಿ ದಿನದಿಂದ ದಿನಕ್ಕೆ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಮುಖ ಕಂಡು ಬಂದಿತು.

ಪ್ರತಿದಿನ ಸರಾಸರಿ 4 ಸಾವಿರದಿಂದ 5 ಸಾವಿರ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಬರುತ್ತಿದ್ದರು. ಆದರೆ ಈ ಒಂದು ಆದೇಶ ಬಂದ ನಂತರ ಇಲ್ಲಿಗೆ ಬರುವವರ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ.ನಿನ್ನೆ ಕೇವಲ 2 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು ಪ್ರವಾಸಿಗರ ಸಂಖ್ಯೆ ಶೇ 60 ರಷ್ಟು ಕ್ಷೀಣಿಸಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಮೂಲಗಳು ತಿಳಿಸಿವೆ.ರಾಷ್ಟ್ರೀಯ ಹೆದ್ದಾರಿ 206ರ ಸೀತಾಕಟ್ಟೆ ಸೇತುವೆಯ ಬಳಿ ಪ್ರವಾಸಿ ಮಿತ್ರ, ಪೊಲೀಸ್‌, ಹೋಂ ಗಾರ್ಡ್ಸ್ ಸಿಬ್ಬಂದಿ ಪ್ರಾಧಿಕಾರದ ತಪಾಸಣಾ ಗೇಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಅಲ್ಲಿ ಆರ್‌ಟಿಪಿಸಿಆರ್ ನೆಗೆಟಿವ್ ದೃಢೀಕರಣ ಪತ್ರವನ್ನು ತೋರಿಸಿದಲ್ಲಿ ಪ್ರವಾಸಿಗರಿಗೆ ಜೋಗ ಜಲಪಾತದ ಪ್ರಧಾನ ಪ್ರವೇಶ ದ್ವಾರಕ್ಕೆ ಪ್ರವೇಶ ಮಾಡಲು ಟೋಕನ್ ನೀಡಲಾಗುತ್ತದೆ. ಕಾರ್ಗಲ್, ವಡನ್ ಬೈಲು, ಲಿಂಗನಮಕ್ಕಿ, ತಳಕಳಲೆ ಪ್ರದೇಶದ ವೀಕ್ಷಣೆಗೆ ಹೋಗುವವರಿಗೆ ಈ ತಪಾಸಣಾ ಗೇಟ್‌ನಲ್ಲಿ ಯಾವುದೇ ತಡೆ ಇರುವುದಿಲ್ಲ.ಇದಲ್ಲದೆ ಜೋಗ ಜಲಪಾತ ವೀಕ್ಷಣೆಯ ಮತ್ತೊಂದು ಪ್ರಮುಖ ವೀಕ್ಷಣಾ ತಾಣವಾದ ಮುಂಬಯಿ ಬಂಗಲೆ ಪ್ರವಾಸಿಗರಿಗೆ ಮುಕ್ತವಾಗಿದೆ. ಇಲ್ಲಿಂದ ಜಲಪಾತ ವೀಕ್ಷಣೆಗೆ ಯಾವುದೇ ರೀತಿಯ ಕೋವಿಡ್ ನಿರ್ಬಂಧಗಳು ಇರುವುದಿಲ್ಲ.ಏಕೆಂದರೆ ಮುಂಬಯಿ ಬಂಗಲೆ ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿ ಯಲ್ಲಿರುವುದರಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಬಾಂಬೇ ಟಿಬಿ ಪ್ರದೇಶದಲ್ಲಿ ಜಾರಿಯಲ್ಲಿರು ವುದಿಲ್ಲ ಎಂದು ಭದ್ರತಾ ಸಿಬ್ಬಂದಿ ತಿಳಿಸಿದ್ದು ಅಸಮಾಧಾನವನವನ್ನುವ್ಯಕ್ತಪಡಿಸುತ್ತಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.