This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಆ ಸೆಕ್ಸ್ ಸಿಡಿ ಬಿಡುಗಡೆಗೆ 15 ಕೋಟಿ ರೂಪಾಯಿ ಖರ್ಚು ಅಂತೆ – ಬಾಲಚಂದ್ರ ಜಾರಕಿಹೊಳಿ ಹೊಸ ಬಾಂಬ್

WhatsApp Group Join Now
Telegram Group Join Now

ಬೆಂಗಳೂರು –

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.ಈಗಾಗಲೇ ಈ ಒಂದು ಪ್ರಕರಣ ಕುರಿತು ದೂರು ನೀಡಿದ್ದ ದಿನೇಶ್ ಕಲ್ಲಹಳ್ಳಿ ದೂರು ಹಿಂದೆ ಪಡೆದುಕೊಂಡಿದ್ದಾರೆ. ಇನ್ನೂ ಇತ್ತ ರಮೇಶ್ ಜಾರಕಿಹೊಳಿ ಪರವಾಗಿ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಈ ಸಂಬಂಧ ಸಮಗ್ರ ತನಿಖೆ ಆಗಬೇಕಿದೆ. ಆ ಹಿನ್ನೆಲೆಯಲ್ಲಿ ಈ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಬೇಕು. ಜಾರಕಿಹೊಳಿ ಕುಟುಂಬ ಮತ್ತು ಪಕ್ಷಕ್ಕೆ ಕೆಟ್ಟ ಹೆಸರು ತರಲು ಕೆಲವರು ಸಂಚು ರೂಪಿಸಿದ್ದಾರೆ ಎಂದರು.

ಕುಮಾರ ಕೃಪಾ ಅತಿಥಿ ಗೃಹದಲ್ಲಿ ಪ್ರೆಸ್ ಮೀಟ್ ಯಲ್ಲಿ ಮಾತನಾಡಿದ ಅವರು ಮಾಧ್ಯಮಗಳಲ್ಲಿ ಸಿಡಿಯಲ್ಲಿರುವ ಮಹಿಳೆಯನ್ನು ಸಂತ್ರಸ್ತೆ ಎಂದು ತೋರಿಸಲಾಗುತ್ತಿದೆ. ಸಂತ್ರಸ್ತೆಯ ಮೂಲಕ ಹನಿಟ್ರ್ಯಾಪ್ ನಡೆಸಲಾಗಿದ್ದು, 15 ಕೋಟಿ ರೂ.ಗಳಷ್ಟು ವೆಚ್ಚ ಮಾಡಿ ರಷ್ಯಾದಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್‍ಲೋಡ್ ಮಾಡಲಾಗಿದೆ’ ಎಂದು ಆರೋಪಿಸಿದರು.

ಕಲ್ಲಹಳ್ಳಿ ದೂರು ದಾಖಲಿಸುವ 3 ಗಂಟೆ ಮೊದಲು ವೀಡಿಯೋ ಅಪ್ ಲೋಡ್ ಮಾಡಲಾಗಿತ್ತು. ಜಾರಕಿಹೊಳಿ ಕುಟುಂಬದ ಹೆಸರು ಹಾಳು ಮಾಡಲು ಷಡ್ಯಂತ್ರ ಮಾಡಲಾಗಿದೆ. ಇದರ ಹಿಂದೆ ಯುವತಿ ಸೇರಿದಂತೆ ಆರೇಳು ಮಂದಿ ಇದ್ದಾರೆ’ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ರಮೇಶ್ ಜಾರಕಿಹೊಳಿ ಅವರು ಕುಟುಂಬ ಮತ್ತು ಪಕ್ಷಕ್ಕೆ ಮುಜುಗರ ಸೃಷ್ಟಿಸುವ ಉದ್ದೇಶದಿಂದಲೇ ಈ ಕೃತ್ಯ ನಡೆಸಲಾಗಿದೆ. ನಮ್ಮ ಮೂಲಗಳ ಪ್ರಕಾರ ಮಹಿಳೆ ಮುಂದೆ ತನ್ನ ಭವಿಷ್ಯದ ಬಗ್ಗೆ ಆ ಕಾಣದ ಕೈಗಳಿಗೆ ಹೇಳಿದಾಗ ಆಕೆಗೆ 50 ಲಕ್ಷ ರೂ. ಹಣ ನೀಡಿ ದುಬೈನಲ್ಲಿ ಕೆಲಸ ಕೊಡಿಸುವ ಆಮಿಷ ನೀಡಿದ್ದಾರೆ. ಈ ಬಗ್ಗೆ ನಾವು ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದರು.

ಪ್ರಕರಣ ಸಂಬಂಧ ದೂರು ನೀಡಿದ ದಿನೇಶ್ ಕಲ್ಲಹಳ್ಳಿಗೆ ಪೂರ್ಣ ಮಾಹಿತಿ ಇಲ್ಲ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಕಲ್ಲಹಳ್ಳಿ ಅವರನ್ನೂ ಈ ಪ್ರಕರಣದಲ್ಲಿ ಟ್ರ್ಯಾಪ್ ಮಾಡಲಾಗಿದೆ. ಹೀಗಾಗಿ ಕಲ್ಲಹಳ್ಳಿ ತಮ್ಮ ವಕೀಲರ ಜೊತೆ ಸಮಾಲೋಚನೆ ನಡೆಸಿ ಪ್ರಕರಣ ಹಿಂಪಡೆದಿದ್ದಾರೆ ಎಂದ ಬಾಲಚಂದ್ರ ಜಾರಕಿಹೊಳಿ, ಆಡಿಯೋ ಮತ್ತು ವಿಡಿಯೋ ಸತ್ಯಾಸತ್ಯತೆ ಬಗ್ಗೆ ಸಮಗ್ರ ತನಿಖೆ ಅಗತ್ಯವಿದೆ. ಹೀಗಾಗಿ ಪ್ರಕರಣ ಸಿಬಿಐಗೆ ಒಪ್ಪಿಸಲು ಸಿಎಂಗೆ ಮನವಿ ಮಾಡುತ್ತೇನೆ ಎಂದರು.


Google News

 

 

WhatsApp Group Join Now
Telegram Group Join Now
Suddi Sante Desk