ಮದುವೆಗೆ ಬಂದ್ರೂ – ಮಸನ ಸೇರಿದ್ರು ಮದುವೆಗೆ ಮನೆಯಲ್ಲಿ ಸೂತಕದ ಛಾಯೆ

Suddi Sante Desk

ಮಂಗಳೂರು –

ಮದುವೆ ಸಮಾರಂಭಕ್ಕೆ ಬಂದಿದ್ದ ನಾಲ್ವರು ನದಿಗೆ ಈಜಾಟಕ್ಕೆ ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಕಡಂದಲೆ ಎಂಬಲ್ಲಿ ಈ ಒಂದು ಘಟನೆ ನಡೆದಿದೆ.

ಕಡಂದಲೆ ಶಾಂಭವಿ ನದಿಯಲ್ಲಿ ಈ ಘಟನೆ ನಡೆದಿದ್ದು ಮೃತಪಟ್ಟವರನ್ನು ವಾಮಂಜೂರು ಮೂಡುಶೆಡ್ಡೆ ನಿವಾಸಿಗಳಾದ ನಿಖಿಲ್ , ಹರ್ಷಿತಾ , ವೇಣೂರಿನ ಸುಭಾಷ್ , ಬಜಪೆ ಪೆರಾರ ನಿವಾಸಿ ರವಿ ಎಂದು ಗುರುತಿಸಲಾಗಿದೆ.

ಕಡಂದಲೆಯ ಶ್ರೀಧರ್ ಆಚಾರ್ಯ ಎಂಬುವರ ಮನೆಗೆ ಮದುವೆ ಸಮಾರಂಭಕ್ಕೆ ಆಗಮಿಸಿದ್ದರು. ಮಧ್ಯಾಹ್ನ ಶಾಂಭವಿ ನದಿಗೆ ಇವರು ಸ್ನಾನಕ್ಕೆಂದು ತೆರಳಿದ್ದು, ಈ ಸಂದರ್ಭ ಆಯತಪ್ಪಿ ನೀರಿನಲ್ಲಿ ಮುಳುಗಿದ್ದಾರೆ.

ಇಬ್ಬರ ಶವವನ್ನು ಮೇಲಕ್ಕೆತ್ತಲಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಮದುವೆಗೆ ಮನೆಯಲ್ಲಿ ಸಂಭ್ರಮದ ಬದಲಿಗೆ ಸಾವಿನ ಸುದ್ದಿಯಿಂದ ಕುಟುಂಬದವರು ಕಂಗಾಲಾಗಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.