ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ – ಜಿದ್ದಾಜಿದ್ದಿನ ಪೈಪೊಟಿಯಲ್ಲಿ ಅತಿ ಹೆಚ್ಚು ಮತ ಪಡೆದು ಗೆದ್ದ ಬಸವರಾಜ…..

Suddi Sante Desk
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ – ಜಿದ್ದಾಜಿದ್ದಿನ ಪೈಪೊಟಿಯಲ್ಲಿ ಅತಿ ಹೆಚ್ಚು ಮತ ಪಡೆದು ಗೆದ್ದ ಬಸವರಾಜ…..

ಗದಗ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆಯಾದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಘಟಕದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಗರಾಜ ಹಳ್ಳಿಕೇರಿ ಮತ್ತು ಬಸವರಾಜ ಬಳ್ಳಾರಿ ನಾಮಪತ್ರ ಸಲ್ಲಿಸಿದ್ದರು.

ನಾಮಪತ್ರ ಪರಿಶೀಲನೆ ನಂತರ ಚುನಾವಣೆ ನಡೆಯಿತು. ಒಟ್ಟು 69 ಮತದಾರರಿದ್ದು ಅದರಲ್ಲಿ 68 ಮಂದಿ ಮತ ಚಲಾಯಿಸಿದರು ಈ ಪೈಕಿ ನಾಗರಾಜ ಹಳ್ಳಿಕೇರಿ 13 ಮತಗಳನ್ನು ಪಡೆದರೆ; ಬಸವರಾಜ ಬಳ್ಳಾರಿ 55 ಮತಗಳನ್ನು ಪಡೆದು ವಿಜಯಶಾಲಿಯಾದರು.

ಬಸವರಾಜ ಬಳ್ಳಾರಿ ಅವರಿಗೆ ಚುನಾವಣಾ ಅಧಿಕಾರಿ ಪ್ರಮಾಣಪತ್ರ ನೀಡಿದರು.ನೂತನ ಅಧ್ಯಕ್ಷ ಬಸವರಾಜ ಬಳ್ಳಾರಿ ಮಾತನಾಡಿ, ‘ಈ ಗೆಲವಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಮತ್ತು ಪದಾಧಿಕಾರಿಗಳು ಕಾರಣ’ ಎಂದು ಕೃತಜ್ಞತೆ ಸಲ್ಲಿಸಿದರು.ಇನ್ನೂ ನನ್ನ ಅವಧಿಯಲ್ಲಿ ನೌಕರರ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ನಂತರ ಅವರ ಅಭಿಮಾನಿಗಳು ಹಾಗೂ ನೌಕರರ ವರ್ಗ ಅವರಿಗೆ ಅಭಿನಂದನೆ ಸಲ್ಲಿಸಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಣೆ ಮಾಡಿದರು.

ಸುದ್ದಿ ಸಂತೆ ನ್ಯೂಸ್ ಗದಗ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.