ವೇತನ ಆಯೋಗಕ್ಕೆ ಸಮಿತಿ ರಚನೆಗೆ ಸೂಚನೆ ನೀಡಿದ CM ರಾಜ್ಯ ಸರ್ಕಾರಿ ನೌಕರರು ಉತ್ತಮ ವಾಗಿ ಕೆಲಸ ಮಾಡ್ತಾರೆಂದರು ಬಸವರಾಜ ಬೊಮ್ಮಾಯಿ…..

Suddi Sante Desk

ಬೆಂಗಳೂರು –

ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅನ್ವಯ ವೇತನ ಹೆಚ್ಚಳ ಮಾಡುವ ಕುರಿತು ವರದಿ ನೀಡಲು ಮುಂಬರುವ ಬಜೆಟ್ ನಲ್ಲಿ ಒಂದು ಸಮತಿ ನೇಮಕ ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದು ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ವೇತನ ಜಾರಿಗೆ ಕ್ರಮವಹಿಸಬೇಕು.ನಮ್ಮ ರಾಜ್ಯದ ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ವೇತನದಲ್ಲಿ ತಾರತಮ್ಯ ಇದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು

ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೂಡಲೇ 7ನೇ ವೇತನ ಆಯೋಗ ಜಾರಿ ಮಾಡಬೇಕು. 6 ನೇ ವೇತನ ಆಯೋಗ ವೇತನದಲ್ಲಿ ಇರೋ ತಾರತಮ್ಯ ಸರಿ ಮಾಡ ಬೇಕು.ರಾಜ್ಯದಲ್ಲಿ 2 ಲಕ್ಷ ಸರ್ಕಾರದಲ್ಲಿ ಹುದ್ದೆಗಳು ಖಾಲಿ ಇವೆ.ಕೂಡಲೇ ಇವುಗಳನ್ನು ಭರ್ತಿ ಮಾಡಬೇಕೆಂಬ ಒತ್ತಾಯ ದ ಕೂಗು ಕೇಳಿ ಬಂದಿತು.ಇದಕ್ಕೆ ರಾಜ್ಯ ಮತ್ತು ಕೇಂದ್ರ ನೌಕರರ ನಡುವೆ ವೇತನ ತಾರತಮ್ಯ ಇದೆ. ರಾಜ್ಯ ದಲ್ಲಿ 2017-18 ರಲ್ಲಿ ವೇತನ ಪರಿಷ್ಕರಣೆ ಆಗಿತ್ತು.ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ಕ್ರಮ ತಗೋತೀವಿ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.