ರಾಜ್ಯದಲ್ಲಿ ಶೀಘ್ರವೇ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆ ಈಗಾಗಲೇ 50 ಕೋಟಿ ರೂಪಾಯಿ ಅನುದಾನ ಬಿಡಗಡೆ ಎಂದರು ಬಸವರಾಜ ಬೊಮ್ಮಾಯಿ…..

Suddi Sante Desk

ಬೆಂಗಳೂರು –

ಸೆಪ್ಟೆಂಬರ್‌ ತಿಂಗಳಲ್ಲಿ ರಾಜ್ಯದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣನ 225ನೇ ಜಯಂತಿ ಹಾಗೂ ಸ್ವಾತಂತ್ರ್ಯ ದಿನಾಚರಣೆ ಅಂಗ ವಾಗಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ಬೇಕಾಗಿರುವ ₹50 ಕೋಟಿ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾ ಗಿದೆ ಎಂದರು.ಈ ಹಿಂದೆ ದಿನೇಶ್ ಗುಂಡೂರಾವ್ ಸಚಿವ ರಿದ್ದಾಗ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ರಾಯಣ್ಣನ ಹೆಸರಿನಲ್ಲಿ ಪ್ರಾಧಿಕಾರ ರಚಿಸಲಾಗಿದೆ. ನಂದಗ ಡದಲ್ಲಿ ಅಥವಾ ಸಂಗೊಳ್ಳಿಯಲ್ಲಿ ಅವರ ಸ್ಮಾರಕ ನಿರ್ಮಾಣ ಮತ್ತು ಸೈನಿಕ ಶಾಲೆಯನ್ನು ಸ್ಥಾಪಿಸುವುದಕ್ಕೆ ₹250 ಕೋಟಿ ಅನುದಾನ ನೀಡಲಾಗಿತ್ತು.ಈ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ನೀಡಿ, ಕಾಮಗಾರಿಗಳನ್ನು ಬೇಗ ಮುಕ್ತಾಯಗೊಳಿಸಬೇಕು’ಎಂದು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.ಮಾಜಿ ಸಚಿವ ಎಚ್.ಎಂ. ರೇವಣ್ಣ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್,ವಾಟಾಳ್ ನಾಗರಾಜ್,ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿ ಇದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.