ಹೆಚ್ಚು ಸೋಂಕು ಕಂಡು ಬಂದರೆ ಆ ಶಾಲೆಗಳು ಬಂದ್ – ಶಾಲೆಗಳ ಜವಾಬ್ದಾರಿ ತಹಶಿಲ್ದಾರ ಮತ್ತು ನೋಡಲ್ ಅಧಿಕಾರಿಗಳಿಗೆ ಬಿ ಸಿ ನಾಗೇಶ್ ಮಾಹಿತಿ…..

Suddi Sante Desk

ಬೆಂಗಳೂರು –

ಶಾಲಾ ಮಕ್ಕಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಸೋಂಕು ಉಲ್ಬಣಿಸಿದರೆ ಆ ಶಾಲೆಗಳನ್ನು ಬಂದ್ ಮಾಡಲಾಗುವುದು‌.ಬೆಂಗಳೂರು ಮಹಾನಗರ ವ್ಯಾಪ್ತಿಯ ಎಲ್ಲ ಶಾಲೆ-ಕಾಲೇಜುಗಳು ಜನವರಿ 29ರವರೆಗೆ ಬಂದ್ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಒಂದು ಮಾಹಿತಿಯನ್ನು ನೀಡಿದರು

ಬೆಂಗಳೂರು ನಗರ ಹೊರತುಪಡಿಸಿ ಉಳಿದೆಡೆ ಶಾಲೆಗಳು ಎಂದಿನಂತೆ ನಡೆಯುತ್ತವೆ.ಒಂದು ಶಾಲೆಯಲ್ಲಿ 20ಕ್ಕೂ ಹೆಚ್ಚು ಮಕ್ಕಳಿಗೆ ಕೊರೊನಾ ಸೋಂಕು ಕಂಡುಬಂದಲ್ಲಿ ಆ ಶಾಲೆಗಳನ್ನು ಬಂದ್ ಮಾಡಲಾಗುವುದು.ಇದರ ಎಲ್ಲ ಜವಾಬ್ದಾರಿಗಳನ್ನು ನೋಡಲ್ ಅಧಿಕಾರಿ ಹಾಗೂ ತಹಶೀಲ್ದಾರ್ ‌ಗಳಿಗೆ ವಹಿಸಲಾಗಿದೆ‌ ಎಂದು ನಾಗೇಶ್ ಹೇಳಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.