ಮನೆಗೆ ಬೆಂಕಿ ಸುಟ್ಟು ಕರಕಲಾದ ಗ್ರಾಮ ಪಂಚಾಯತಿ ಸದಸ್ಯ ಮನೆಗೆ ಎಸಿ ಹಾಕಿಸೋ ಮುನ್ನ ಹುಷಾರಾಗಿರಿ…..

Suddi Sante Desk

ಚಿಕ್ಕೋಡಿ –

ಶಾರ್ಟ್ ಸರ್ಕ್ಯೂಟ್ ನಿಂದ ಹತ್ತಿಕೊಂಡ ಬೆಂಕಿ ಯಿಂದಾಗಿ ಮನೆಗೆ ಬೆಂಕಿ ಬಿದ್ದು ಗ್ರಾಮ ಪಂಚಾಯಿ ತಿರೊಬ್ಬರು ಸದಸ್ಯರೊಬ್ಬರು ಸಜೀವ ದಹನ ಆದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ‌.

ಸೋಮಶೇಖರ್ ಶಿವಾನಂದ ಪಾಟೀಲ್(32) ಮೃತ ದುರ್ದೈವಿಯಾಗಿದ್ದಾರೆ‌.ಇವರು ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶಿರಗುಪ್ಪಿ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಇವರೊಬ್ಬರೇ ಮಲಗಿದ್ದರು. ಈ ವೇಳೆ ಎಸಿ ಶಾರ್ಟ್ ಸರ್ಕ್ಯೂಟ್ ಆಗಿ ಇಡೀ ಮನೆಗೆ ಬೆಂಕಿ ಆವರಿಸಿದ್ದು ಸೋಮಶೇಖರ್ ಸಜೀವ ದಹನ ಆಗಿ ದ್ದಾರೆ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.