This is the title of the web page
This is the title of the web page

Live Stream

[ytplayer id=’1198′]

October 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಉಡುಪಿ

BEO ಅಮಾನತು ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಅಮಾನತು ಮಾಡಿ ಆದೇಶ ಮಾಡಿದ DDPI

BEO ಅಮಾನತು ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಅಮಾನತು ಮಾಡಿ ಆದೇಶ ಮಾಡಿದ DDPI
WhatsApp Group Join Now
Telegram Group Join Now

ಬೈಂದೂರು

ಬೈಂದೂರಿನಲ್ಲಿ ಇತ್ತೀಚೆಗೆ ನಡೆದ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಶಿಕ್ಷಕರು,ಮಕ್ಕಳ ಪೋಷಕರು, ಇಲಾಖಾ ಸಿಬ್ಬಂದಿಗಳು ಹಾಜರಾಗುವಂತೆ ಸೂಚನೆ ನೀಡಿ ಕರ್ತವ್ಯ ಲೋಪ ಎಸಗಿದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಎಂ.ಜಿ. ಅವರನ್ನು ಅಮಾನತುಗೊಳಿಸಲಾಗಿದೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮ ಚಂದ್ರಪ್ಪ ಆದೇಶ ಹೊರಡಿಸಿದ್ದಾರೆ.

ನವೆಂಬರ್ 7ರಂದು ಬೈಂದೂರು ತಾಲೂಕಿನ ಹೊಸಾಡು ಗ್ರಾಮದ ಮಲ್ಲಿಕಟ್ಟೆ ಎಂಬಲ್ಲಿ ನಡೆದ ಮುಖ್ಯಮಂತ್ರಿಗಳ ಸರಕಾರಿ ಕಾರ್ಯಕ್ರಮಕ್ಕೆ ಬೈಂದೂರು ವಲಯದ ಎಲ್ಲಾ ಶಿಕ್ಷಕರು, ಶಾಲಾ ಪೋಷಕರು,ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ಎಲ್ಲ ಸಿಬ್ಬಂದಿ ವರ್ಗದವರಿಗೆ ಹಾಜರಾಗಲು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಎಂ.ಜಿ. ಸೂಚನೆ ನೀಡಿದ್ದರು.ಈ ಕಾರ್ಯಕ್ರಮಕ್ಕೆ ಭಾಗವಹಿಸಲು ಸೂಚಿಸಿರು ವುದು ಸರಕಾರಿ ನೌಕರರಿಗೆ ತರವಲ್ಲದ ವರ್ತನೆ ಯಾಗಿದ್ದು ಇವರು ನಿಯಮಗಳನ್ನು ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿರುವುದರಿಂದ ಇವರ ವಿರುದ್ಧ ಇಲಾಖಾ ವಿಚಾರಣೆ ಶಿಸ್ತು ಕ್ರಮ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ನೀಡಲಾಗಿದೆ.

ವರದಿ – ಚಕ್ರವರ್ತಿ ಜೊತೆಗೆ ರವಿ ಗೌಡರ ಸುದ್ದಿ ಸಂತೆ ನ್ಯೂಸ್


Google News

 

 

WhatsApp Group Join Now
Telegram Group Join Now
Suddi Sante Desk