BEO ಡಾ ನಾಗರಾಜ್ ಇನ್ನಿಲ್ಲ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಂತಾಪ ಕಾರ್ಯವೈಖರಿಯನ್ನು ನೆನೆದ ಸಂಘದ ಸರ್ವ ಸದಸ್ಯರು

Suddi Sante Desk

ಶೃಂಗೇರಿ –

ಮಹಾಮಾರಿ ಕೋವಿಡ್ ಗೆ ರಾಜ್ಯದಲ್ಲಿ ಮತ್ತೊರ್ವ ಆದರ್ಶ ಶಿಕ್ಷಣ ಅಧಿಕಾರಿ ಬಲಿಯಾಗಿದ್ದಾರೆ. ಶಿಕ್ಷಕ ರೊಂದಿಗೆ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದವರೊಂದಿಗೆ ತುಂಬಾ ಅಚ್ಚು ಮೆಚ್ಚು ಹಾಗೇ ಆತ್ಮೀಯರಾಗಿದ್ದ ಶೈಕ್ಷಣಿಕ ಕ್ಷೇತ್ರದಲ್ಲಿ ಹತ್ತು ಹಲವಾರು ಅಭಿವೃದ್ದಿ ಕಾರ್ಯಗಳ ಮೂಲಕ ಶಿಕ್ಷಕರಿಗೆ ಮಕ್ಕಳ ಪ್ರೀತಿಗೆ ಪಾತ್ರರಾಗಿದ್ದ ಬಿಇಓ ರೊ ಬ್ಬರು ಕೋವಿಡ್ ನಿಂದಾಗ ನಿಧನರಾಗಿದ್ದಾರೆ. ಹೌದು
ಡಾ ನಾಗರಾಜ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶೃಂಗೇರಿ ಅವರು ಇಂದು ಕೋವಿಡ್ ನಿಂದ ನಿಧನರಾಗಿದ್ದಾರೆ.

ಇತ್ತೀಚೆಗೆ ಅಷ್ಟೇ ಭಡ್ತಿ ಪಡೆದುಕೊಂಡಿದ್ದ ಇವರಿಗೆ ಕಳೆದ ಕಳೆದ ವಾರ ಕರ್ತವ್ಯದ ಮೇಲಿದ್ದ ಇವರಿಗೆ ಕರೋನಾ ಸೋಂಕು ಕಾಣಿಸಿಕೊಂಡು ನಂತರ ಪರೀ ಕ್ಷೆ ಮಾಡಿಸಿದ ಮೇಲೆ ಪಾಸಿಟಿವ್ ಅಂತಾ ತಿಳಿದು ಚಿಕಿತ್ಸೆಗೆ ದಾಖಲಾಗಿದ್ದರು.ಆಸ್ಪತ್ರೆಯಲ್ಲಿ ಚಿಕಿತ್ಸೆಯ ನ್ನು ಪಡೆದುಕೊಳ್ಳುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಆಸ್ಪತ್ರೆಯಲ್ಲಿ ಸಾವಿಗೀಡಾಗಿ ದ್ದಾರೆ.

ಇನ್ನೂ ಮೃತರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಭಗವಂತನಲ್ಲಿ ಪ್ರಾರ್ಥನೆ ಮಾಡಿ ಸಂತಾಪವನ್ನು ಸೂಚಿಸಿದ್ದಾರೆ.ಇದರೊಂದಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಂತಾಪ ವನ್ನು ಸೂಚಿಸಲಾಯಿತು.

ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಪ್ರಧಾನ ಕಾರ್ಯದ ರ್ಶಿ ಚಂದ್ರಶೇಖರ ನುಗ್ಗಲಿ ಸೇರಿದಂತೆ ಸಂಘದ ಸರ್ವ ಸದಸ್ಯರು ನೋವಿನ ಶಕ್ತಿಯನ್ನು ಆ ಒಂದು ಕುಟುಂಬ ತಡೆದುಕೊಳ್ಳುವ ಶಕ್ತಿಯನ್ನು ಕೊಡಲೇಂದು ಪ್ರಾರ್ಥಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.