ಅಂಕೋಲಾ (ಉತ್ತರ ಕನ್ನಡ):
ಕರ್ತವ್ಯ ಲೋಪ ಹಿನ್ನಲೆಯಲ್ಲಿ Beo ರೊಬ್ಬರನ್ನು ಅಮಾನತು ಮಾಡಿ ಆದೇಶವನ್ನು ಮಾಡಲಾಗಿದೆ. ಹೌದು ಅಂಕೋಲಾ ದ ಕ್ಷೇತ್ರ ಶಿಕ್ಷಣಾಧಿಕಾರಿ ಶಾಮಲಾ ನಾಯಕ ಅವರನ್ನು ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಅಮಾನತು ಮಾಡಿ ಆದೇಶವನ್ನು ಹೊರಡಿಸಲಾಗಿದೆ.
ಅವರ ವಿರುದ್ಧ ಹಲವು ಆರೋಪಗಳು ಕೇಳಿಬಂದಿ ದ್ದವು.ಈ ಹಿನ್ನೆಲೆಯಲ್ಲಿ ನಾಲ್ಕು ವಿವಿಧ ದೂರುಗಳ ಆಧಾರದ ಮೇಲೆ ಅವರನ್ನು ಸಧ್ಯ ಸೇವೆ ಯಿಂದ ಅಮಾನತು ಮಾಡುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರ್ಕಾರಕ್ಕೆ ಕೋರಿದ್ದರು.ಇನ್ನೂ ಇತ್ತ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಅವರು ಆಗಸ್ಟ್ 3 ರಂದು ತನಿಖೆ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.ಒಟ್ಟು 15 ವಿವಿಧ ದೂರುಗಳ ಅನ್ವಯ ನಾಗರಿಕ ಸೇವಾ ನಡತೆ 2021ರ ನಿಯಮ 3ರ ಉಪನಿಯಮ 1(1),(2),(3)ರ ಅಡಿಯಲ್ಲಿ ಕರ್ತವ್ಯ ದುರುಪಯೋಗ ವಾಗಿದ್ದು ಅಮಾನತು ಮಾಡಲು ಶಿಫಾರಸು ಮಾಡಿದ್ದರು.
ಇಲಾಖಾ ವಿಚಾರಣೆ ಅಥವಾ ಶಿಸ್ತುಕ್ರಮ ಬಾಕಿ ಇರಿಸಿ ಕರ್ನಾಟಕ ನಾಗರಿಕ ಸೇವಾ ನಿಯಮ 1957 ರ 10(1), 10(3) ಅಡಿಯಲ್ಲಿ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಯ ಅಧೀನ ಕಾರ್ಯದರ್ಶಿ ಎಮ್ ಧನಂಜಯ ಆದೇಶ ಹೊರಡಿಸಿದ್ದು ಇತ್ತ ಇದನ್ನು ಅಧಿಕೃತವಾಗಿ ಅಧಿಕಾರಿಗಳೇ ಸ್ಪಷ್ಟ ಪಡಿಸಬೇಕು.