ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ – CM ಗೆ ಅಭಿನಂದನೆ ಸಲ್ಲಿಸಿ ಷಡಾಕ್ಷರಿ ರಾಜ್ಯದ ಶಿಕ್ಷಕರಿಗೆ ಹೇಳಿದ್ದೇನು ನೋಡಿ……

Suddi Sante Desk
ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ – CM ಗೆ ಅಭಿನಂದನೆ ಸಲ್ಲಿಸಿ ಷಡಾಕ್ಷರಿ ರಾಜ್ಯದ ಶಿಕ್ಷಕರಿಗೆ ಹೇಳಿದ್ದೇನು ನೋಡಿ……

ಧಾರವಾಡ

ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಶಿಕ್ಷಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ ಹೌದು ಚುನಾವಣಾ ಆಯೋಗದ ಅನುಮತಿ ಪಡೆದು ವರ್ಗಾವಣೆಗೆ ಮರು ಚಾಲನೆಗೆ ಸಚಿವ ಸಂಪುಟದ ಸಭೆ ಒಪ್ಪಿಗೆ ನೀಡಿದೆ.

ಹೌದು ಚುನಾವಣೆ ಆಯೋಗದ ಅನುಮತಿ ಯೊಂದಿಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

ವಿಧಾನಸಭೆ ಚುನಾವಣೆ ಸಮೀಪದದಲ್ಲಿ ಇರುವುದರಿಂದ ನೀತಿ ಸಂಹಿತೆ ಜಾರಿಯಾದರೆ ವರ್ಗಾವಣೆ ನಡೆಯುವುದಿಲ್ಲ ಎನ್ನುವ ಆತಂಕ ಶಿಕ್ಷಕರಲ್ಲಿತ್ತು.ಸಂಪುಟ ಸಭೆಯಲ್ಲಿ ಆಯೋಗದ ಅನುಮತಿ ಪಡೆದು ವರ್ಗಾವಣೆಗೆ ಮರು ಚಾಲನೆ ನೀಡಲು ಒಪ್ಪಿಗೆ ನೀಡಲಾಗಿದ್ದು ಇದರಿಂದ ಚುನಾವಣೆ ನೀತಿ ಸಂಹಿತೆ ಜಾರಿಯಾದರೂ ಶಿಕ್ಷಕರ ವರ್ಗಾವಣೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಎಂದು ಹೇಳಲಾಗಿದೆ.

 

ಸರ್ಕಾರದ ನಿರ್ಧಾರದಿಂದ ಶಿಕ್ಷಕರ ವರ್ಗಾವ ಣೆಯ ಕನಸು ನನಸಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದುಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.