This is the title of the web page
This is the title of the web page

Live Stream

[ytplayer id=’1198′]

October 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಬೆಂಗಳೂರು ನಗರ

ಬಿಜೆಪಿ ಪಕ್ಷದ ಬಾರ ಇಳಿಸಿ ಬಿಟ್ಟು KRP ಪಕ್ಷದ ಬಾರ ಹೊತ್ತುಕೊಂಡ ಭೀಮಾಶಂಕರ ಪಾಟೀಲ – ಜನಾರ್ದನ ರೆಡ್ಡಿಯ ಹೊಸ ಪಕ್ಷ ಸೇರಿದ ಬೆನ್ನಲ್ಲೇ ಯಡಿಯೂರಪ್ಪ ಆಪ್ತನಿಗೆ ಸಿಕ್ಕಿತು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಪಟ್ಟ…..

ಬಿಜೆಪಿ ಪಕ್ಷದ ಬಾರ ಇಳಿಸಿ ಬಿಟ್ಟು KRP ಪಕ್ಷದ ಬಾರ ಹೊತ್ತುಕೊಂಡ ಭೀಮಾಶಂಕರ ಪಾಟೀಲ – ಜನಾರ್ದನ ರೆಡ್ಡಿಯ ಹೊಸ ಪಕ್ಷ ಸೇರಿದ ಬೆನ್ನಲ್ಲೇ ಯಡಿಯೂರಪ್ಪ ಆಪ್ತನಿಗೆ ಸಿಕ್ಕಿತು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಪಟ್ಟ…..
WhatsApp Group Join Now
Telegram Group Join Now

ಬೆಂಗಳೂರು

ಬಿಜೆಪಿ ಪಕ್ಷದ ಬಾರ ಇಳಿಸಿ ಬಿಟ್ಟು KRP ಪಕ್ಷದ ಬಾರ ಹೊತ್ತುಕೊಂಡ ಭೀಮಾಶಂಕರ ಪಾಟೀಲ – ಜನಾರ್ದನ ರೆಡ್ಡಿಯ ಹೊಸ ಪಕ್ಷ ಸೇರಿದ ಬೆನ್ನಲ್ಲೇ ಯಡಿಯೂರಪ್ಪ ಆಪ್ತನಿಗೆ ಸಿಕ್ಕಿತು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಪಟ್

ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಲ್ಲಾ ಪಕ್ಷಗಳಲ್ಲಿ ಪಕ್ಷಾಂತರ ಪರ್ವ ಹೆಚ್ಚಾಗುತ್ತಿದ್ದು ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ಭೀಮಾಶಂಕರ ಪಾಟೀಲ ಕೆಆರ್ ಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.ಹೌದು ಮಾಜಿ ಸಚಿವ ಜನಾರ್ಧನ ರೆಡ್ಡಿಯ ಹೊಸ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.

ಹೌದು ಪಕ್ಷದ ಯುವ ಘಟಕಕ್ಕೆ ನೂತನ ರಾಜ್ಯಾ ಧ್ಯಕ್ಷರನ್ನು ನೇಮಕ ಮಾಡಲಾಗಿದ್ದು ಬಿಜೆಪಿ ಯುವ ಮೋರ್ಚಾದ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷರು ಈಗ ಬಿಜೆಪಿ ತೊರೆದು ಜನಾರ್ದನ ರೆಡ್ಡಿ ಪಕ್ಷವನ್ನು ಸೇರಿದ್ದಾರೆ.ಭೀಮಾಶಂಕರ ಪಾಟೀಲ್ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಯುವ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಗೊಂಡಿದ್ದಾರೆ

ಮಾಜಿ ಸಚಿವ ಜನಾರ್ದನ ರೆಡ್ಡಿ ನೇಮಕಾತಿ ಪತ್ರವನ್ನು ನೀಡಿದ್ದಾರೆ. ಆಳಂದ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಭೀಮಾಶಂಕರ ಪಾಟೀಲ್ ಬಿಜೆಪಿ ಬಿಟ್ಟು ಜನಾರ್ದನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.ಮಾಜಿ ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪ ಆಪ್ತರಾಗಿದ್ದ ಭೀಮಾಶಂಕರ ಪಾಟೀಲ್ ಕಳೆದ 20 ವರ್ಷಗ ಳಿಂದ ಸಾಮಾಜಿಕ ಹೋರಾಟ, ಕನ್ನಡಪರ ಹೋರಾಟಗಳ ಮೂಲಕ ಸಾರ್ವಜನಿಕ ಜೀವನ ದಲ್ಲಿದ್ದಾರೆ.

ಕರ್ನಾಟಕ ನವನಿರ್ಮಾಣ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು ಆಗಿದ್ದಾರೆ. ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದ ಅವರು ಈಗ ಬಿಜೆಪಿ ತೊರೆದಿದ್ದಾ ರೆ.ಬಿಜೆಪಿಯಲ್ಲಿದ್ದಾಗ ಬೆಳಗಾವಿ ಗ್ರಾಮೀಣ, ಚಿಕ್ಕೋಡಿ ಜಿಲ್ಲೆಗಳ ಪ್ರಭಾರಿಗಳಾಗಿ ಮತ್ತು ಗೋವಾ ಚುನಾವಣಾ ಉಸ್ತುವಾರಿಗಳಾಗಿ ಕೆಲಸ ಮಾಡಿದ್ದರು ಭೀಮಾಶಂಕರ ಪಾಟೀಲ್.

ಈ ಬಾರಿಯ ಚುನಾವಣೆಗೆ ಆಳಂದ ವಿಧಾನ ಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಟಿಕೆಟ್ ಘೋಷಣೆಗೂ ಮೊದಲೇ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಸಧ್ಯ ಹೊಸ ಪಕ್ಷದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk