ಮುಖ್ಯಶಿಕ್ಷಕ ಮೇಲೆ ದೂರು ನೀಡಿದ ಬಿಸಿಯೂಟ ದ ಅಧಿಕಾರಿ ದೊಡ್ಡ ಸ್ಥಾನದಲ್ಲಿ ಇದ್ದವರು ಹೀಗ್ಯಾಕೆ ಮಾಡತಾರೆ…..

Suddi Sante Desk

ಮಂಡ್ಯ

ಮಕ್ಕಳ ಬಿಸಿಯೂಟಕ್ಕೆ ಬಳಸಬೇಕಿದ್ದತೊಗರಿಬೇಳೆಯನ್ನು ಕದ್ದು ಸಾಗಿಸುತ್ತಿದ್ದ ಆರೋಪದ ಮೇಲೆ ಮುಖ್ಯ ಶಿಕ್ಷಕನ ಮೇಲೆ ಶಿಕ್ಷಣ ಇಲಾಖೆಯ ಬಿಸಿಯೂಟ ವಿಭಾಗದ ಅಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ.ಮಳವಳ್ಳಿ ತಾಲ್ಲೂಕಿನ ಮಾರೆಗೌಡನಹಳ್ಳಿ ಶಾಲೆಯ ಮುಖ್ಯ ಶಿಕ್ಷಕ ಕಾಳರಾಜೇಗೌಡ ವಿರುದ್ಧ ಬೇಳೆ ಕಳ್ಳತನದ ಆರೋಪ ಕೇಳಿ ಬಂದಿದೆ.ಶಾಲೆಯಲ್ಲಿ ಕದ್ದ ಬೇಳೆಯನ್ನು ಆಟೊವೊಂದರಲ್ಲಿ ಹಲಗೂರಿನ ಅಂಗಡಿಗೆ ಸಾಗಿಸುತ್ತಿದ್ದ ವೇಳೆ ವೇಳೆಸ್ಥಳೀಯ ರೊಬ್ಬರು ವಿಡಿಯೊ ಮಾಡಿಕೊಂಡು ಸಾಮಾಜಿಕ ಮಾಧ್ಯ ಮಗಳಿಗೆ ಹರಿಬಿಟ್ಟಿದ್ದರು.

ವಿಡಿಯೊ ನೋಡಿದ್ದ ಜನರು ಶಿಕ್ಷಕನ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದರು.ವಿಡಿಯೊ ಸಾಕ್ಷ್ಯದ ಆಧಾರದ ಮೇಲೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುಖ್ಯ ಶಿಕ್ಷಕನಿಗೆ ನೊಟೀಸ್ ಜಾರಿ ಮಾಡಿದ್ದರು.ಕಳ್ಳತನ ವಿಡಿಯೊ ಆಧರಿಸಿ ಹಲಗೂರು ಪೊಲೀಸರಿಗೆ ಬಿಸಿಯೂಟದ ಅಧಿಕಾರಿ ದೂರು ನೀಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.