This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

BJP ಶಾಸಕ CM ಉದಾಸಿ ಇನ್ನಿಲ್ಲ ಬೆಂಗಳೂರಿನಲ್ಲಿ ಕೊನೆಉಸಿರೆಳೆದ ಹಿರಿಯ ಬಿಜೆಪಿ ಶಾಸಕ…..

WhatsApp Group Join Now
Telegram Group Join Now

ಬೆಂಗಳೂರು –

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಾವೇರಿಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನರಾಗಿದ್ದಾರೆ‌. ಬೆಂಗಳೂ ರಿನಲ್ಲಿ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದ ಹಿರಿಯ ಶಾಸಕರು ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲು ತ್ತಿದ್ದರು ಇವರು‌.ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರ ದ ಬಿಜೆಪಿ ಶಾಸಕ ಸಿಎಂ ಉದಾಸಿ(77)ಯವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಪಕ್ಷ ದಲ್ಲಿ ಹಿರಿಯರು ಆಗಿದ್ದ ಇವರು ಚಿಕಿತ್ಸೆ ಫಲಕಾರಿ ಯಾಗದೇ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ 77 ವರ್ಷದ ಉದಾಸಿ ಅವರು ಅನಾರೋಗ್ಯ ಹಿನ್ನೆಲೆ ಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಬಿ.ಎಸ್‌. ಯಡಿ ಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು.

ಶಾಸಕ ಸಿಎಂ ಉದಾಸಿಯವರು ಪಕ್ಷದಲ್ಲಿ ಹಿರಿಯ ಶಾಸಕರಾಗಿದ್ದರು. ಇವರ ಪುತ್ರ ಹಾವೇರಿ ಜಿಲ್ಲೆಯ ಸಂಸದರಾಗಿದ್ದಾರೆ.ಇನ್ನೂ ಇವರು ಈ ಹಿಂದೆ ಸಚಿವ ರಾಗಿ ಸಾಕಷ್ಟು ಪ್ರಮಾಣದಲ್ಲಿ ಕೆಲಸ ಕಾರ್ಯಗಳ ನ್ನು ಮಾಡಿದ್ದಾರೆ‌.ಒಳ್ಳೇಯ ಸಜ್ಜನ ರಾಜಕಾರಣಿ ಎಂದೇ ಹೆಸರಾಗಿದ್ದು ಇಂದು ಚಿಕಿತ್ಸೆ ಫಲಕಾರಿಯಾ ಗದೇ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಬಿಜೆಪಿ ಶಾಸಕ ಸಿಎಂ ಉದಾಸಿ ಇನ್ನಿಲ್ಲವಾಗಿದ್ದು ಪಕ್ಷ ಹಿರಿಯ ರಾಜಕಾರಣಿ ಯೊಬ್ಬ ರನ್ನು ಕಳೆದುಕೊಂಡಿದ್ದು ಮೃತರಾದ ಇವರಿಗೆ ಪಕ್ಷದ ನಾಯಕರು ಮುಖಂಡರು ಸಂತಾಪ ಸೂಚಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk