BJP ಯ ಮೂವರು ನಾಯಕರಿಗೆ ಹೈಕಮಾಂಡ್ ನಿಂದ ಬುಲಾವ್ – ಕುತೂಹಲ ಕೆರಳಿಸಿದ ಹೈಕಮಾಂಡ್ ಆಮಂತ್ರಣ…..

Suddi Sante Desk
BJP ಯ ಮೂವರು ನಾಯಕರಿಗೆ ಹೈಕಮಾಂಡ್ ನಿಂದ ಬುಲಾವ್ – ಕುತೂಹಲ ಕೆರಳಿಸಿದ ಹೈಕಮಾಂಡ್ ಆಮಂತ್ರಣ…..

ಬೆಂಗಳೂರು

BJP ಯ ಮೂವರು ನಾಯಕರಿಗೆ ಹೈಕಮಾಂಡ್ ನಿಂದ ಬುಲಾವ್ – ಕುತೂಹಲ ಕೆರಳಿಸಿದ ಹೈಕಮಾಂಡ್ ಆಮಂತ್ರಣ  ಹೌದು ನಾಳೆಯೇ ದೆಹಲಿಗೆ ಬನ್ನಿ ಎಂಬ ಸಂದೇಶವನ್ನು ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ನೀಡಿದೆ.ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ,ಸಂಸದ ಪಿ.ಸಿ. ಮೋಹನ್ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದು ಹೋಗಲು ಸಿದ್ದರಾಗಿದ್ದಾರೆ.

ವರಿಷ್ಠರು ಕರೆ ಮಾಡಿ ಸೂಚನೆಯನ್ನು ಕೂಡಾ ನೀಡಿದ್ದಾರೆ.ಗುರುವಾರ ಮಧ್ಯಾಹ್ನ 3:30ಕ್ಕೆ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲು ಸೂಚನೆ ನೀಡಲಾಗಿದೆ.ಕಳೆದ ವಾರ ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಅವರಿಗೆ ಹೈಕಮಾಂಡ್ ಬುಲಾವ್ ನೀಡಿತ್ತು. ಆದರೆ ದೆಹಲಿಗೆ ಹೋದರೂ ಅವರನ್ನು ಭೇಟಿ ಮಾಡದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ವಾಪಸ್ ಕಳುಹಿಸಿದ್ದರು.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ,ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ತೀವ್ರವಾದ ಕುತೂಹಲವನ್ನು ಕೆರಳಿಸಿದ್ದು ಏನೇನಾಗಲಿದೆ ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.