ಪ್ರಾಧ್ಯಾಪಕರ ಪರೀಕ್ಷೆ ಯಲ್ಲೂ ಅಕ್ರಮ – ಕೆಲವೊಂದಿಷ್ಟು ಅಭ್ಯರ್ಥಿ ಗಳಿಗೆ ಸಿಸಿಬಿ ನೋಟೀಸ್…..

Suddi Sante Desk

ಬೆಂಗಳೂರು

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ನಡೆಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ಅಂಕಗಳ ಪಟ್ಟಿ ಬಿಡುಗಡೆ ಮಾಡಿದ್ದು ಇದರ ಬೆನ್ನಲ್ಲೇ ‍ಪ್ರಶ್ನೆಗಳ ಸೋರಿಕೆ ಪ್ರಕರಣದಲ್ಲಿ ಕೆಲವು ಅಭ್ಯರ್ಥಿಗಳಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.ರಾಜ್ಯದಾದ್ಯಂತ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಒಎಂಆರ್‌ ಪ್ರತಿಗಳ ಮೌಲ್ಯಮಾಪನ ಮುಕ್ತಾಯಗೊಳಿಸಿರುವ ಕೆಇಎ ಸ್ಪರ್ಧಾತ್ಮಕ ಪರೀಕ್ಷೆಯ ವಿಷಯವಾರು ಅಂಕಪಟ್ಟಿಯನ್ನು ಜಾಲತಾಣದಲ್ಲಿ ಪ್ರಕಟಿಸಿದೆ.ಇನ್ನೂ ಭೂಗೋಳ ವಿಜ್ಞಾನ ವಿಷಯದ ಪ್ರಶ್ನೆಗಳ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಅನುಮಾನಾಸ್ಪದ ಅಭ್ಯರ್ಥಿಗಳ ಬಗ್ಗೆಯೂ ಮಾಹಿತಿ ಕಲೆಹಾಕುತ್ತಿದ್ದಾರೆ.

ಒಎಂಆರ್ ಪ್ರತಿ ನೀಡದಿದ್ದಕ್ಕೆ ಮತ್ತೊಮ್ಮೆ ಪತ್ರ ಮಾರ್ಚ್‌ 14ರಂದು ನಡೆದಿದ್ದ ಭೂಗೋಳ ವಿಜ್ಞಾನ ವಿಷಯ ಪರೀ ಕ್ಷೆಯ 18 ಪ್ರಶ್ನೆಗಳು ಪರೀಕ್ಷೆಗೂ ಮುನ್ನವೇ ಸೋರಿಕೆ ಆಗಿದ್ದವು.ಈ ಬಗ್ಗೆ ಮಲ್ಲೇಶ್ವರ ಠಾಣೆಗೆ ಕೆಇಎ ಕಾರ್ಯನಿ ರ್ವಾಹಕ ನಿರ್ದೇಶಕಿ ಎಸ್ ರಮ್ಯಾ ದೂರು ನೀಡಿದ್ದರು.

ಪ್ರಶ್ನೆಗಳನ್ನು ಸೋರಿಕೆ ಮಾಡಿದ್ದ ಆರೋಪದಡಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕುಲಸಚಿವ ರಾಗಿದ್ದ (ಮೌಲ್ಯಮಾಪನ) ಪ್ರೊ. ಎಚ್‌. ನಾಗರಾಜ್ ಹಾಗೂ ಅವರ ಪಿಎಚ್‌ಡಿ ವಿದ್ಯಾರ್ಥಿ ಆರ್.ಸೌಮ್ಯಾ ಅವರನ್ನು ಈಗಾಗಲೇ ಬಂಧಿಸಲಾಗಿದೆ.ಅಕ್ರಮ ಎಸಗಿದ್ದ ಅನುಮಾನದಡಿ ಇಬ್ಬರು ಅಭ್ಯರ್ಥಿಗಳ ಒಎಂಆರ್ ಪ್ರತಿ ನೀಡುವಂತೆ ಕೆಇಎಗೆ ಪತ್ರ ಬರೆಯಲಾಗಿತ್ತು. ಮೌಲ್ಯಮಾ ಪನ ನೆಪ ಹೇಳಿದ್ದ ಕೆಇಎ,ಇದುವರೆಗೂ ಒಎಂಆರ್‌ ನೀಡಿಲ್ಲ ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಲಭ್ಯವಿರುವ ಮಾಹಿತಿ ಆಧರಿಸಿ 10ಕ್ಕೂ ಹೆಚ್ಚು ಅಭ್ಯರ್ಥಿ ಗಳ ಪಟ್ಟಿ ಸಿದ್ಧಪಡಿಸಲಾಗಿದೆ.ಅವರೆಲ್ಲರಿಗೂ ನೋಟಿಸ್ ನೀಡಲಾಗಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾ ಗಿದೆ.ಸಿಸಿಬಿಯ ಎಸಿಬಿ ನೇತೃತ್ವದ ತಂಡ ಅಭ್ಯರ್ಥಿಗಳ ವಿಚಾರಣೆ ನಡೆಸಲಿದೆ.ಅವರ ಹೇಳಿಕೆ ಪರಿಶೀಲಿಸಿದ ಬಳಿಕವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದು ಅಂಕಪಟ್ಟಿ ಬಿಡುಗಡೆಯಾಗಿರುವುದರಿಂದ ಅಭ್ಯರ್ಥಿಗಳ ಒಎಂಆರ್ ಪ್ರತಿ ನೀಡುವಂತೆ ಕೆಇಎಗೆ ಮತ್ತೊಮ್ಮೆ ಪತ್ರ ಬರೆಯಲಾಗುವುದು.ಅದಕ್ಕೆ ಪ್ರತಿಕ್ರಿಯೆ ನೀಡದಿದ್ದರೆ ಕಾನೂನು ಪ್ರಕಾರ ಅಧಿಕಾರಿಗಳಿಗೆ ನೋಟಿಸ್ ನೀಡಲಾ ಗುವುದು ಎಂದೂ ಹೇಳಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.