This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State Newsಧಾರವಾಡ

ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್ ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಕೇಂದ್ರ ಸಚಿವ ರಿಗೆ ಸಾಥ್ ನೀಡಿದ ಜಿಲ್ಲೆಯ ಶಾಸಕರು ಪಕ್ಷದ ಮುಖಂಡರು ಕಾರ್ಯಕರ್ತರು

WhatsApp Group Join Now
Telegram Group Join Now

ಹುಬ್ಬಳ್ಳಿ

ಕಳಸಾ-ಬಂಡೂರಿ ನಾಲಾ ವಿಸ್ತೃತ ಯೋಜನೆಗೆ ಕೇಂದ್ರದ ಜಲ ಆಯೋಗ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಹು-ಧಾ ಮಹಾನಗರ ಹಾಗೂ ಗ್ರಾಮಾಂ ತರ ಘಟಕದಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.ನಗರದ ನೆಹರೂ ಮೈದಾನ ದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಜಯೋತ್ಸವಕ್ಕೆ ಚಾಲನೆ ನೀಡಿದರು.

ಬಳಿಕ ತೆರೆದ ವಾಹನದಲ್ಲಿ ಶಾಸಕ ಅರವಿಂದ ಬೆಲ್ಲದ್ ಸೇರಿದಂತೆ ಇನ್ನಿತರ ಬಿಜೆಪಿ ಮುಖಂಡ ರೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಸಂಗೊಳ್ಳಿ ರಾಯಣ್ಣ ವೃತ್ತದ ಮಾರ್ಗ ವಾಗಿ,ಚನ್ನಮ್ಮ ವೃತ್ತದವರೆಗೆ ನೂರಾರು ಜನ ರೊಂದಿಗೆ, ಗೊಂಬೆ ಕುಣಿತ,ಡೊಳ್ಳು ವಾದ್ಯಗ ಳೊಂದಿಗೆ ಮಹದಾಯಿ ರ‍್ಯಾಲಿ ವಿಜಯೋತ್ಸವ ಆಚರಣೆ ಮಾಡಿದರು.ಈ ವೇಳೆ ಡಾ.ಬಿ.ಆರ್. ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ ಹಾಗೂ ಚನ್ನಮ್ಮ ಪುತ್ಥಳಿಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಲಾರ್ಪಣೆ ಮಾಡಿದರು.

ರ‍್ಯಾಲಿ ಯುದ್ದಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರವಾಗಿ ಘೋಷಣೆಗಳು ಮೊಳ ಗಿದವು‌.ಇನ್ನು ಪ್ರಧಾನಿ ನರೇಂದ್ರ ಮೋದಿ,ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರ ಭಾವಚಿತ್ರಗಳು ರ‍್ಯಾಲಿಯಲ್ಲಿ ರಾರಾಜಿಸುತ್ತಿದ್ದವು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk