ಪ್ರೇಮಿಗಳು ಆತ್ಮಹತ್ಯೆ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾದ ಚೇತನಾ,ಸಿರಸ್ ಚಂದ್ರ…..

Suddi Sante Desk

ಬೆಂಗಳೂರು –

ರೈಲು ಹಳಿಗೆ ತಲೆ ಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ‌. ಹೊಸ ಕೋಟೆ ಸಮೀಪದ ಕನ್ನಮಂಗಲದ ನಿವಾಸಿ ಚೇತನಾ (20) ಹಾಗೂ ಸಿರಸ್‌ ಚಂದ್ರ (21) ಆತ್ಮಹತ್ಯೆಗೆ ಶರಣಾದ ವರಾಗಿದ್ದಾರೆ.ಬೆಂಗಳೂರಿನ ಕೆ.ಆರ್‌.ಪುರಂನ ಸೌತ್‌ ಈಸ್ಟ್‌ ಏಷ್ಯನ್‌ (ಎಸ್‌ಇಎ) ಕಾಲೇಜಿನಲ್ಲಿ ಬಿಪಿಎ ವ್ಯಾಸಂಗ ಮಾಡುತ್ತಿದ್ದ ಚೇತನಾ ಮತ್ತು ಸಿರಸ್‌ ಚಂದ್ರ ಅವರೇ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳಾಗಿದ್ದು ಇಬ್ಬರೂ ಹೊರ ಮಾವು ರೈಲ್ವೆ ಬ್ರಿಡ್ಜ್ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಇನ್ನೂ ಈ ಒಂದು ಪ್ರಕರಣ ತಿಳಿದು ಸ್ಥಳಕ್ಕೆ ಬೈಯಪ್ಪ ನಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಆತ್ಮಹ ತ್ಯೆಗೆ ನಿಖರವಾದ ಕಾರಣವನ್ನು ಹುಡುಕುತ್ತಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತಿದೆ.ಈ ಸಂಬಂಧ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.