This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ಶಾಲೆ ಪ್ರಾರಂಭವನ್ನು ಮುಂದೊ ಡೊದು ದೊಡ್ಡ ಹನ್ನಾರವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಆರೋಪ ಯಾವುದೇ ಕಾರಣಕ್ಕೂ ಮುಂದೂಡದಂತೆ ಮುಖ್ಯಮಂತ್ರಿ ಯವರಿಗೆ ಮನವಿ…..

WhatsApp Group Join Now
Telegram Group Join Now


ಬೆಂಗಳೂರು –

ರಾಜ್ಯದಲ್ಲಿ ಕೋವಿಡ್‌ನಿಂದ ಎರಡು ವರ್ಷ ಮಕ್ಕಳಿಗೆ ಸೂಕ್ತ ಪಾಠವಿಲ್ಲದೇ ಕಲಿಕೆಯಲ್ಲಿ ಹಿಂದುಳಿದಿದ್ದಾರೆ.ಇದನ್ನು ಸರಿದೂಗಿಸುವ ನಿಟ್ಟಿನಲ್ಲಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮೇ 16 ರಂದೇ ರಾಜ್ಯದಲ್ಲಿ ಶಾಲೆಗಳ ಅರಂಭಕ್ಕೆ ಸೂಚನೆ ನೀಡಿದ್ದರು.ಬೇಸಿಗೆ ಹಾಗೂ ಕೋವಿಡ್ 4ನೇ ಅಲೆ ನೆಪ ದಲ್ಲಿ ಶಾಲೆ ಪ್ರಾರಂಭ ದಿನಾಂಕವನ್ನು ಮುಂದೂಡಿಸುವ ಹುನ್ನಾರ ನಡೆದಿದ್ದು ಯಾವುದೇ ಕಾರಣಕ್ಕೂ ಶಾಲೆಗಳ ಪ್ರಾರಂಭ ದಿನಾಂಕವನ್ನು ಮುಂದೂಡಬಾರದು ಎಂದು ಕ್ಯಾಮ್ಸ್ ಸಂಘಟನೆ ಮನವಿ ಮಾಡಿದೆ.ಈ ಕುರಿತು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಗೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಡಿ ಮನವಿ ಮಾಡಿದ್ದಾರೆ.

ಕೋವಿಡ್‌ನಿಂದಾಗಿ ಎರಡು ವರ್ಷದಿಂದ ಆನ್‌ಲೈನ್ ಕಲಿಕೆಗೆ ಅವಕಾಶ ನೀಡಿದ್ದರಿಂದ ಮಕ್ಕಳ ಕಲಿಕೆ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ.ಎರಡು ಶೈಕ್ಷಣಿಕ ವರ್ಷದಲ್ಲಿ ಮಕ್ಕಳ ಕಲಿಕೆ ಕನಿಷ್ಠವಾಗಿದೆ.ಮಾನಸಿಕ ವಾಗಿ ದೈಹಿಕವಾಗಿ ಮತ್ತು ಶೈಕ್ಷಣಿಕವಾಗಿ ಕಲಿಕೆಯಿಂದ ಹಿಂದು ಳಿದು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದರು.ಹೀಗಾಗಿ ಶಿಕ್ಷಣ ಇಲಾಖೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮೇ16 ರಿಂದ ಶಾಲೆಗಳನ್ನು ಆರಂಭ ಮಾಡಿ ಅಧಿಸೂಚನೆ ಹೊರಡಿಸಿತ್ತು. ಆದರೆ ಕೆಲವು ರಾಜಕಾರಣಿಗಳು ನಾನಾ ಕಾರಣ ನೀಡಿ ಶಾಲೆಗಳ ಅರಂಭ ದಿನಾಂಕವನ್ನು ಮುಂದೂಡುವ ಪ್ರಯತ್ನ ಮಾಡಲು ಸರ್ಕಾರದ ಮೇಲೆ ಪ್ರಭಾವ ಹಾಕುತ್ತಿ ದ್ದಾರೆ. ಮುಖ್ಯಮಂತ್ರಿಗಳು ಹಾಲಿ ನಿರ್ಧಾರದಿಂದ ಹಿಂದೆ ಸರಿಯದೇ ನಿಗದಿಯಂತೆ ಶಾಲೆಗಳ ಆರಂಭಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಕ್ಯಾಮ್ಸ್ ಮನವಿ ಮಾಡಿದೆ. ವೈಜ್ಞಾನಿಕ ಅಭಿಪ್ರಾಯ ಪರಿಗಣಿಸಿ: ರಾಜ್ಯದಲ್ಲಿ ಕೊರೊನಾ ದಿಂದ ಮಕ್ಕಳ ಕಲಿಕೆ ಮೇಲೆ ಆಗಿರುವ ಪರಿಣಾಮದ ಬಗ್ಗೆ ಅನೇಕ ಅಧ್ಯಯನ ವರದಿಗಳು ಬೆಳಕು ಚೆಲ್ಲಿವೆ. ಇದನ್ನು ಪರಿಗಣಿಸಿ ವೈಜ್ಞಾನಿಕವಾಗಿಯೇ ತಜ್ಞರು ಆಲೋಚಿಸಿ ಮೇ. 16 ರಿಂದ ಶಾಲೆಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಅವಕಾಶ ನೀಡಿ ಆದೇಶ ಹೊರಡಿಸಿದೆ.ಈಗಾಗಲೇ ರಾಜ್ಯದಲ್ಲಿ ಉತ್ತ ಮವಾದ ಬೇಸಿಗೆ ಮಳೆಯಾಗಿದ್ದು, ಶಾಲೆಗಳಲ್ಲಿ ಮಕ್ಕಳು ಕಲಿಯುವುದರಿಂದ ಬೇಸಿಗೆ ಸಮಸ್ಯೆ ಉದ್ಭವಿಸುವುದಿಲ್ಲ. ಈ ಎಲ್ಲಾ ವಿಚಾರ ಗಮನದಲ್ಲಿ ಇಟ್ಟುಕೊಂಡೇ ಶಾಲೆಗಳ ಪ್ರಾರಂಭಕ್ಕೆ ಮೇ. 16 ನಿಗದಿ ಮಾಡಿರುವುದು ವೈಜ್ಞಾನಿಕ ವಾಗಿದೆ.ಆದರೆ ರಾಜಕಾರಣಿಗಳ ಪ್ರಭಾವಕ್ಕೆ ಒಳಗಾಗಿ ಶಾಲೆಗಳ ಪ್ರಾರಂಭ ದಿನಾಂಕ ಮುಂದೂಡಬಾರದು ಇದರಿಂದ ಮಕ್ಕಳ ಕಲಿಕೆ ಮೇಲೆ ಪರಿಣಾಮ ಬೀರಲಿದೆ. ಹೆಚ್ಚುವರಿ ದಿನಗಳು ಸಿಗುವ ಕಾರಣದಿಂದ ಕಲಿಕೆಯಿಂದ ಹಿಂದುಳಿದ ಮಕ್ಕಳನ್ನು ತಯಾರಿಗೊಳಿಸಲು ಸಮಯ ಸಿಕ್ಕಂತಾಗುತ್ತದೆ. ಈ ವೈಜ್ಞಾನಿಕ ಸತ್ಯ ಅರಿತು ಶಾಲೆಗಳನ್ನು ನಿಗದಿಯಂತೆ ಮೇ. 16 ರಿಂದ ಪ್ರಾರಂಭ ಮಾಡಲು ಅನುವು ಮಾಡಿಕೊಡಬೇಕು ಎಂದು ಕ್ಯಾಮ್ಸ್ ಸಂಘಟನೆ ಸಿಎಂಗೆ ಸಲ್ಲಿಸಿರುವ ಮನವಿಯಲ್ಲಿ ಕೋರಿದೆ.


Google News

 

 

WhatsApp Group Join Now
Telegram Group Join Now
Suddi Sante Desk