This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಹಳ್ಳದಲ್ಲಿ ನಡೆದುಕೊಂಡು ಹೋಗಬೇಕು ಶಾಲೆಗೆ – ಜೀವವನ್ನು ಕೈಯಲ್ಲಿಟ್ಟುಕೊಂಡು ಮಕ್ಕಳ ಸಂಚಾರ…..

ಹಳ್ಳದಲ್ಲಿ ನಡೆದುಕೊಂಡು ಹೋಗಬೇಕು ಶಾಲೆಗೆ – ಜೀವವನ್ನು ಕೈಯಲ್ಲಿಟ್ಟುಕೊಂಡು ಮಕ್ಕಳ ಸಂಚಾರ…..
WhatsApp Group Join Now
Telegram Group Join Now

ಬೆಳಗಾವಿ

ಹೌದು ಇಂತಹ ದೊಂದು ಚಿತ್ರಣ ಬೆಳಗಾವಿ ಜಿಲ್ಲೆ ಯಲ್ಲಿ ಕಂಡು ಬರುತ್ತಿದೆ.ಯಾರೊ ಮಾಡಿದ ತಪ್ಪಿ ನಿಂದ ವಿದ್ಯಾರ್ಥಿಗಳು ತೋಟದ ವಸತಿ ಪ್ರದೇಶ ಗಳಿಂದ ನಾಗನೂರ-ಪಿಎ ಗ್ರಾಮದ ಶಾಲೆಗೆ ಹಳ್ಳ ದಲ್ಲಿ ನಡೆದುಕೊಂಡೇ ಹೋಗಬೇಕಿದೆ. ಅಥಣಿ ತಾಲ್ಲೂಕಿನಲ್ಲಿ ಇರುವ ಈ ಗ್ರಾಮವು ಕಾಗವಾಡ ವಿಧಾನಭಾ ಕ್ಷೇತ್ರಕ್ಕೆ ಒಳಪಟ್ಟಿದೆ.

ಕಂಟೇಕರ ತೋಟ, ಚೌಗಲಾ ತೋಟ ಮತ್ತು ‍ಪವಾರ ತೋಟದ ವಸತಿ ಪ್ರದೇಶದಲ್ಲಿ 40 ಶಾಲಾ ವಿದ್ಯಾರ್ಥಿಗಳು ಇದ್ದಾರೆ. ತೋಟದ ವಸತಿ ಮತ್ತು ಗ್ರಾಮದ ಮಧ್ಯೆ ಹಳ್ಳ ಹರಿದಿದೆ. ಈ ಹಿಂದೆ ಇದ್ದ ರಸ್ತೆಯನ್ನು ರೈತರು ಅಗೆದಿದ್ದಾರೆ.ಇದರಿಂದ ವಿದ್ಯಾರ್ಥಿಗಳು ತುಂಬಿ ಹರಿಯುವ ಹಳ್ಳದಲ್ಲೇ ನಡೆದುಕೊಂಡು ಹೋಗಬೇಕಿದೆ.

ಹೆಚ್ಚು ಮಳೆಯಾಗಿ ಹಳ್ಳದ ನೀರು ಏರಿದರೆ ಸುತ್ತಿ ಬಳಸಿ ಹೊಲ- ಗದ್ದೆಗಳಲ್ಲಿ ದಾಟಿಕೊಂಡು ಶಾಲೆ ತಲುಪಬೇಕು.ವಿದ್ಯಾರ್ಥಿಗಳು ಪ್ರತಿದಿನ ಶಾಲೆ ತಲುಪುವಷ್ಟರಲ್ಲೇ ಸಮವಸ್ತ್ರ ಕೆಸರುಮಯ ಆಗಿರುತ್ತದೆ. ಬೂಟು, ಸಾಕ್ಸ್‌ಗಳನ್ನು ಕೈಯಲ್ಲಿ ಹಿಡಿದು ಅಥವಾ ಸೊಂಟಕ್ಕೆ ಕಟ್ಟಿಕೊಂಡು ಶಾಲೆಗೆ ಹೋಗಬೇಕು.

ಶಾಲಾ ಆವರಣದ ನೀರಿನಲ್ಲಿ ಮತ್ತೆ ಕೈಕಾಲು ತೊಳೆದು ಬೂಟುಗಳನ್ನು ಧರಿಸಬೇಕು. ಸಮ ವಸ್ತ್ರ ಅಲ್ಲದೇ ಶಾಲಾ ಬ್ಯಾಗು ಕೂಡ ಕೆಸರು ಮಯ ಆಗಿರುತ್ತದೆ.ನಾಗನೂರ-ಪಿಎ ಗ್ರಾಮ ಹಾಗೂ ಸಂಬರಗಿ ಗ್ರಾಮಗಳ ಮಧ್ಯೆ ಹಳ್ಳ ಇದೆ. ಈ ಎರಡೂ ಗ್ರಾಮಗಳ ಮಧ್ಯದಲ್ಲೇ ಈ ಮೂರು ತೋಟದ ವಸತಿ ಪ್ರದೇಶಗಳಿವೆ.

ಗ್ರಾಮಗಳ ಮಧ್ಯೆ ಈ ಹಿಂದೆ ಕಚ್ಚಾ ರಸ್ತೆ ಇತ್ತು. ಆದರೆ, ಇಕ್ಕೆಲಗಳ ರೈತರ ತಮ್ಮ ಜಮೀನು ಎಂದು ಅದನ್ನು ಬಳಸಿ ಬಿತ್ತನೆ ಮಾಡಿದ್ದಾರೆ. ರಸ್ತೆಯ ಜಾಗ ಮತ್ತು ಹೊಲಗಳ ವ್ಯಾಪ್ತಿ ಎಷ್ಟು ಎಂದು ಸರಿಯಾಗಿ ಅಳತೆ ಮಾಡಿ ಕೊಡಬೇಕಾದ ಭೂ ಮಾಪನಾ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ.

ಇದರಿಂದ ರಸ್ತೆಯೇ ಮಾಯವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಕಣ್ತೇರೆದು ನೋಡ್ತಾರೆ ಸ್ಪಂದಿಸುತ್ತಾರೆಯಾ ಎಂಬೊಂದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..

 


Google News

 

 

WhatsApp Group Join Now
Telegram Group Join Now
Suddi Sante Desk