ಸ್ವಚ್ಚ ಸಂಡೇ ಅಭಿಯಾನ – ಛತ್ರಪತಿ ಶಿವಾಜಿ ವೃತ್ತ ಸ್ವಚ್ಚತೆ

Suddi Sante Desk

ಧಾರವಾಡ –

ಧಾರವಾಡದಲ್ಲಿ ಬಿಜೆಪಿ ಯುವ ಮೋರ್ಚಾದ ಸ್ವಚ್ಚ ಸಂಡೇ ಅಭಿಯಾನ ಮುಂದುವರಿದಿದೆ‌. ಇಂದು
ಭಾರತೀಯ ಜನತಾ ಪಕ್ಷದ ಧಾರವಾಡ ನಗರ 71ಯುವಮೋರ್ಚಾ ಘಟಕದ ವತಿಯಿಂದ ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ನಿಮಿತ್ತ ಸ್ವಚ್ಚತಾ ಕಾರ್ಯ ಮಾಡಲಾಯಿತು.

ಧಾರವಾಡದ ಪ್ರಸಿದ್ಧ ಛತ್ರಪತಿ ಶಿವಾಜಿ ವೃತ್ತ ವನ್ನು ಯುವಮೋರ್ಚಾ ಅಧ್ಯಕ್ಷ ಶಕ್ತಿ ಹಿರೇಮಠ ಅವರ ನೇತೃತ್ವದಲ್ಲಿ ಸ್ವಚ್ಚ ಗೊಳಿಸಲಾಯಿತು. ವಿಶೇಷ ಅತಿಥಿ ಗಳಾಗಿ ಯುವಕರ ನಾಯಕರು, ಯುವ ಧುರೀಣ ರಾದ ಸಂಕಲ್ಪ ಶೆಟ್ಟರ್ ಅವರು ಸ್ವಚ್ಚ ಭಾರತ ಅಭಿಯಾನದಲ್ಲಿ ಭಾಗವಹಿಸಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ 71ರ ಮಂಡಳ ಅಧ್ಯಕ್ಷರಾದ ಸುನೀಲ ಮೋರೆ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಕಿರಣ ಉಪ್ಪಾರ್ ಮಂಡಳ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ಕೋಟ್ಯಾನ್, ಹರೀಶ ಬಿಜಾಪುರ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರಾದ ಶಂಕರ ಶೆಳಕೆ

ಜಿಲ್ಲಾ ಕಾರ್ಯದರ್ಶಿಗಳಾದ ಸಿದ್ದು ಕಲ್ಯಾಣ ಶೆಟ್ಟಿ, ಮಂಜುನಾಥ ಭೋಸಲೆ ಮಂಡಳ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನಾಯಕ ಗೊಂಧಳಿ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಮಂಜುನಾಥ ಯರಗಟ್ಟಿ ಸ್ವಚ್ಚ ಭಾರತ ಜಿಲ್ಲಾ ಸಂಚಾಲಕರಾದ ವಿನೋದ್ ಸಹ ಸಂಚಾಲಕರಾದ ಪ್ರಕಾಶ್ ಇಂಗಳೆ, ಪಕ್ಷದ ಹಿರಿಯರಾದ ನಿಂಗಪ್ಪ ಸಪೂರಿ, ರವಿ ಯಂಡಿಗೆರಿ

ಮಂಜುನಾಥ ಮಾಳೆ ರಾಹುಲ್ ಅಷ್ಟಗಿ ಯುವಮೋರ್ಚಾ ಪ್ರಮುಖ ಪದಾಧಿಕಾರಿಗಳಾದ ರಾಘವೇಂದ್ರ ತುಪ್ಪದ, ಕಾರ್ತಿಕ ಪೂಜಾರ್, ಸಚಿನ ಚವಾಣ್, ಸೂರಂಜನ್ ಗೂಂಡೆ, ಶ್ರೀಕಾಂತ ಒಂಟಿ ಸಾಗರ್ ಜೋಶಿ, ರಾಜೇಶ್ ನಾಯ್ಕ್ , ರವಿ ಮಾಳಗಾರ್,

ಗುರು ತಳವಾರ ರೋಹಿತ ಜಾಧವ ಕಾರ್ತಿಕ ಹೆಂಬಲಿ, ಸಿದ್ದು ದಳವಿ ತಾನಾಜಿ ರೋಖಡೆ, ರಾಹುಲ ಚಾಬುಕಾಸವಾರ, ಅಭಿಷೇಕ್ ಗಂಗನಗೌಡ, ಸೇರಿದಂತೆ ಎಲ್ಲ ಯುವಮೋರ್ಚಾ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.