This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಬೆಳಗಾವಿ

ಗ್ರಾಮ ಪಂಚಾಯತ ಸದಸ್ಯರಿಗೂ ಪಿಂಚಣಿ ಸೌಲಭ್ಯ ಘೋಷಣೆ ಮಾಡಿದ CM – ಜನಪ್ರತಿನಿಧಿಗಳಿಗೆ ಒಂದು ನ್ಯಾಯ ಸರ್ಕಾರಿ ನೌಕರರಿಗೆ ಇನ್ನೊಂದು ನ್ಯಾಯ ಇದ್ಯಾವ ಸೀಮೆ ವ್ಯವಸ್ಥೆ ಮುಖ್ಯಮಂತ್ರಿಗಳೇ……

WhatsApp Group Join Now
Telegram Group Join Now

ಬೆಳಗಾವಿ

ರಾಜ್ಯದ ಗ್ರಾಮ ಪಂಚಾಯತ ಸದಸ್ಯರಿಗೆ ಇತ್ತೀಚಿಗಷ್ಟೇ ವೇತನವನ್ನು ಹೆಚ್ಚಿಗೆ ಮಾಡಿದ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇವರಿಗೆ ಮತ್ತೊಂದು ಬಂಪರ್ ಕೊಡುಗೆಯನ್ನು ನೀಡಿದ್ದಾರೆ.ಹೌದು ಇವರಿಗೂ ಕೂಡಾ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರೋದಾಗಿ ಹೇಳಿದ್ದಾರೆ.ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾ ಲದ ಅಧಿವೇಶನದಲ್ಲಿ ಈ ಕುರಿತಂತೆ ಮಾಹಿತಿ ಯನ್ನು ನೀಡಿದರು.

ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯಿತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿ ದರು.ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರು,ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಕ್ರಮವಾಗಿ 6000 ರೂ., 4000 ರೂ.ಹಾಗೂ 2,000 ರೂ. ಗೌರವ ಧನ ಪರಿಷ್ಕರಿಸಿ ನಿಗದಿ ಮಾಡಲಾಗಿದೆ.

ಇದರೊಂದಿಗೆ ಗ್ರಾಮ ಪಂಚಾಯಿತಿ ಪ್ರತಿನಿಧಿ ಗಳು ತಮ್ಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಪ್ರಯಾಣ ಭತ್ಯೆ ಮತ್ತು ದಿನ ಭತ್ಯೆ ನೀಡಲಾಗು ವುದು.ಕೋವಿಡ್ ನಂತರ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ ಹೀಗಾಗಿ ಈ ಒಂದು ಹಿನ್ನೆಲೆಯಲ್ಲಿ ಗೌರವ ಧನ ಹೆಚ್ಚಳ ಮಾಡಲಾಗಿದ್ದು ಆರ್ಥಿಕ ಪರಿಸ್ಥಿತಿ ಮತ್ತಷ್ಟು ಸುಧಾರಣೆಯಾದಲ್ಲಿ ಗೌರವ ಧನ ಮತ್ತಷ್ಟು ಹೆಚ್ಚಳ ಮಾಡಿ ಪಿಂಚಣಿ ಸೌಲಭ್ಯ ವನ್ನು ಜಾರಿಗೆ ಮಾಡಲಾಗುವುದು ಎಂದರು.

ಇದು ಒಂದು ವಿಚಾರವಾದರೆ ಇನ್ನೂ ಹೊಸ ಪಿಂಚಣಿ ವ್ಯವಸ್ಥೆ ವಿರುದ್ದ ಕಳೆದ ಐದು ದಿನಗ ಳಿಂದ ಬೆಂಗಳೂರಿನಲ್ಲಿ ರಾಜ್ಯದ ಎನ್ ಪಿ ಎಸ್ ನೌಕರರು ಹೋರಾಟವನ್ನು ಮಾಡುತ್ತಿದ್ದಾರೆ.

 

 

ಈ ಕುರಿತಂತೆ ಸ್ಪಂದಿಸದ ಮುಖ್ಯಮಂತ್ರಿ ಸಧ್ಯ ಗ್ರಾಮ ಪಂಚಾಯತ ಸದಸ್ಯರಿಗೆ ಪಿಂಚಣಿ ಸೌಲಭ್ಯವನ್ನು ನೀಡುವ ತೀರ್ಮಾನವನ್ನು ಕೈಗೊಂಡಿದ್ದು ಬೇಸರದ ಸಂಗತಿಯಾಗಿದ್ದು ಜನಪ್ರತಿನಿಧಿಗಳಿಗೆ ಒಂದು ನ್ಯಾಯ ಸರ್ಕಾರಿ ನೌಕರರಿಗೆ ಮತ್ತೊಂದು ನ್ಯಾಯ ಎಂಬಂತಾಗಿದೆ ರಾಜ್ಯ ಸರ್ಕಾರದ ಧೋರಣೆ.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ……

 

 


Google News

 

 

WhatsApp Group Join Now
Telegram Group Join Now
Suddi Sante Desk