CM ಬದಲಾವಣೆ ಊಹಾಪೋಹ ವರಿಷ್ಠರ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…..

Suddi Sante Desk

ಹುಬ್ಬಳ್ಳಿ –

ಮುಖ್ಯಮಂತ್ರಿ ಬದಲಾವಣೆ ವಿಚಾರ ಇಲ್ಲ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳು ಹರಡುತ್ತಿರುವುದು ತಪ್ಪು ಎಂದರು.

ಇನ್ನೂ ಅವರು ಅಮೇರಿಕಾ ಹೋಗ್ತಾರೆ ಅವರನ್ನ ಕೆಳಗಿಳಿ ಸುತ್ತಾರೆ ಇದೆಲ್ಲ ಸುಳ್ಳು.ಸಿಎಂ ಬದಲಾವಣೆ ಬಗ್ಗೆ ವರಿಷ್ಠರ ಮಟ್ಟದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದರು.ದಿ. ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಸ್ವಚ್ಚತಾ ಅಭಿಯಾನದ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಮಾತನಾಡಿದರು.

ರುದ್ರಭೂಮಿ ಸ್ವಚ್ಚತೆ ಕೈಗೆತ್ತಿಕೊಳ್ಳಲಾಗಿದೆ.ಶಾಶ್ವತವಾಗಿ ಸ್ವಚ್ಚಗೊಳಿಸಿ,ಸುಣ್ಣ-ಬಣ್ಣ ಬಳಿದು ವಿದ್ಯುತ್ ದೀಪಗಳನ್ನು ಅಳವಡಿಸುವ ಕಾರ್ಯ ಮಾಡುತ್ತಿದ್ದೇವೆ ಎಂದರು. ರಾಷ್ಟ್ರೀಯ ಪಕ್ಷ ರಾಷ್ಟ್ರೀಯ ಸೇವೆಯಲ್ಲಿ ತೊಡಗಿಸಿ ಕೊಳ್ಳಬೇಕು ಎಂಬುದು ಪ್ರಧಾನಿಗಳ ಆಶಯವಾಗಿದೆ ಎಂದರು

ಇನ್ನೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಸೆ ಯಂತೆ ಸ್ವಚ್ಚತಾ ಕಾರ್ಯ ನಡೆಯುತ್ತಿದೆ.ಸಂಸತ್ ಸದನ ದಲ್ಲಿ ಪ್ರತಿಪಕ್ಷಗಳ ವರ್ತನೆಗೆ ವಿಷಾದ ವ್ಯಕ್ತಪಡಿಸಿ ಅಂದ್ರು ಕಾಂಗ್ರೆಸ್ ಕೇಳಲಿಲ್ಲ.ಮೋದಿ ಏನೂ ಮಾಡಿದ್ರು ಕಾಂಗ್ರೆಸ್ ನವರು ವಿರೋಧ ಮಾಡ್ತಾ ಇದಾರೆ ಎಂದರು.

ಮೋದಿ ಪೋಬಿಯಾ ಎನ್ನುವಂತೆ ಕಾಂಗ್ರೆಸ್ ನವರು ನಡೆದುಕೊಳ್ಳುತ್ತಿದ್ದಾರೆ.ಅಂಬೇಡ್ಕರ್ ರವರ ಸಂವಿಧಾನ ವನ್ನು ಸಹ ಬಹಿಷ್ಕಾರ ಮಾಡಿದ್ರು.ಕಾಂಗ್ರೆಸ್ ಪಕ್ಷ ಬಹಿಷ್ಕಾರ ಮಾಡಿ ಅಂಬೇಡ್ಕರ್ ರವರಿಗೆ ಅಪಮಾನ ಮಾಡಿದ್ದಾರೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.