ರಾಜ್ಯ ಸರ್ಕಾರಿ ನೌಕರರ ಸಂಘಟನೆಯ ಮುಖಂಡರೊಂದಿಗೆ ತುರ್ತು ಸಭೆ ಮಾಡಿದ CM – 7ನೇ ವೇತನ ಆಯೋಗ ಅನುಷ್ಠಾನ ಸೇರಿದಂತೆ ಹಲವಾರು ವಿಚಾರಗಳ ಕುರಿತು ಮುಖಂಡರೊಂದಿಗೆ ಚರ್ಚೆ ಮಾಡಿದ ನಾಡದೊರೆ

Suddi Sante Desk
ರಾಜ್ಯ ಸರ್ಕಾರಿ ನೌಕರರ ಸಂಘಟನೆಯ ಮುಖಂಡರೊಂದಿಗೆ ತುರ್ತು ಸಭೆ ಮಾಡಿದ CM – 7ನೇ ವೇತನ ಆಯೋಗ ಅನುಷ್ಠಾನ ಸೇರಿದಂತೆ ಹಲವಾರು ವಿಚಾರಗಳ ಕುರಿತು ಮುಖಂಡರೊಂದಿಗೆ ಚರ್ಚೆ ಮಾಡಿದ ನಾಡದೊರೆ

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರ ಸಂಘಟನೆಯ ಮುಖಂಡ ರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಭೆ ಮಾಡಿದರು ಹೌದು ಸಂಘದ ಪದಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯ ಸಭೆ ಮಾಡಿ ಹಲವಾರು ವಿಚಾರ ಗಳ ಕುರಿತು ಚರ್ಚೆಯನ್ನು ಮಾಡಿದರು

ರಾಜ್ಯಾಧ್ಯಕ್ಷರು ಸರ್ಕಾರಿ ನೌಕರರ ಬೇಡಿಕೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳ ಸಮಯ ಯನ್ನು ಕೋರಿದ್ದರು ಮುಖ್ಯಮಂತ್ರಿಗಳು  ಸಮಯ ನೀಡಿದ್ದರು. ಸಿ ಎಸ್ ಷಡಾಕ್ಷರಿ ಹಾಗೂ ಮಾಜಿ ಅಧ್ಯಕ್ಷರಾದ ಎಲ್ ಬೈರಪ್ಪ ರವರು ಸಿದ್ದರಾಮಯ್ಯನವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿದರು

ಏಳನೇ ವೇತನ ಆಯೋಗದ ಶಿಫಾರಸು ವರದಿ ಯನ್ನು ಶೀಘ್ರ ಜಾರಿಗೊಳಿಸುವಂತೆ ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಯನ್ನು ಅನುಷ್ಠಾನಗೊಳಿಸಲು ಮನವಿ ಮಾಡಿ ದರು.ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು

ಸಚಿವ ಸಂಪುಟದ ಸಚಿವರುಗಳು ಅನೌಪ ಚಾರಿಕವಾಗಿ ಅನುಮತಿ ನೀಡಿರುತ್ತಾರೆ. ಆದಷ್ಟು ಶೀಘ್ರದಲ್ಲೇ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವ ಭರವಸೆ ನೀಡಿದರು. 2024-ನೇ ಸಾಲಿನ ರಾಜ್ಯಮಟ್ಟದ ಕ್ರೀಡಾ ಮತ್ತು ಸಂಸ್ಕೃತಿಕ ಸ್ಪರ್ಧೆಗಳನ್ನು ಆಗಸ್ಟ್ ತಿಂಗಳಲ್ಲಿ ನಡೆಸಲು ಅನುಮತಿ ನೀಡಲಾಯಿತು

ನಮ್ಮ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಪರವಾಗಿದ್ದು ತಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ ಯಾರು ಆತಂಕ ಪಡುವ ಅವಶ್ಯಕತೆಯಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು ರಾಜ್ಯ ಸಂಘದ ಪದಾಧಿಕಾ ರಿಗಳು ಹಾಗೂ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.