ಬೆಂಗಳೂರು –
ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸುವವರಿಗೆ ವಾರ್ನಿಂಗ್ ಮಾಡಿದ CM ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ ಹೌದು ಶಾಲಾ ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಶುಚಿಗೊ ಳಿಸುವುದು ಅತ್ಯಂತ ಹೀನ ಕೃತ್ಯವಾಗಿದ್ದು ಹೀಗೆ ಮಾಡಿಸಿದವರ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದ ರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್(ಟ್ವಿಟರ್)ನಲ್ಲಿ ಟ್ವೀಟ್ ಮಾಡಿರುವ ಅವರು ಶಾಲೆಯ ಶೌಚಾಲಯಗಳನ್ನು ಶುಚಿಗೊ ಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣ ಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ. ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಂಡಿದ್ದಾರೆ.
ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯು ತ್ತಿದ್ದರೆ ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಾಲೆ-ಕಾಲೇ ಜುಗಳ ಹಾಸ್ಟೆಲ್ಗಳಲ್ಲಿಯೂ ಈ ಬಗ್ಗೆ ನಿಗಾವಹಿ ಸುವಂತೆ ಸಮಾಜ ಕಲ್ಯಾಣ ಸಚಿವರಿಗೂ ತಿಳಿಸಿದ್ದೇನೆ.
ಪ್ರತಿಯೊಂದು ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇರಬೇಕು ಮತ್ತು ಅವುಗಳನ್ನು ಪ್ರತಿದಿನ ಶುಚಿ ಗೊಳಿಸಲು ಸಿಬ್ಬಂದಿಯನ್ನು ನೇಮಕ ಮಾಡ ಬೇಕು.ಈ ಬಗ್ಗೆ ಒಂದು ಸಮೀಕ್ಷೆ ನಡೆಸಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ವರದಿ ತರಿಸುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯನವರು, ಪ್ರತಿ ಯೊಂದು ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇರಬೇಕು ಎಂದು ಖಡಕ್ ಆಗಿ ಸೂಚನೆ ನೀಡಿ ದ್ದಾರೆ. ಜೊತೆಗೆ ಪ್ರತಿದಿನ ಶೌಚಾಲಯ ಶುಚಿ ಗೊಳಿಸಲು ಸಿಬ್ಬಂದಿಯನ್ನು ನೇಮಕ ಮಾಡ ಬೇಕು ಎಂದು ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..